ಸಿಎಂ ಯೋಗಿ ಆದಿತ್ಯನಾಥ್ 
ದೇಶ

ಯೋಗಿ ನಾಡಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ! ಫತೇಹಾಬಾದ್ ಗೆ 'ಸಿಂಧೂರಪುರಂ' ಮರುನಾಮಕರಣ

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಸರು ಬದಲಾವಣೆ ರಾಜಕೀಯ ಮುಂದುವರೆದಿದೆ. ಇದೀಗ ಆಗ್ರಾದ ಫತೇಹಾಬಾದ್ ಪಟ್ಟಣ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ.

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜು ಭಡೋರಿಯಾ ಅವರು ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಿ ಸರ್ವಾನುಮತದಿಂದ ಅಂಗೀಕರಿಸಿದರು. ಇದೀಗ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ.

ಈ ಪ್ರದೇಶಗಳು ಗುಲಾಮಗಿರಿ ಸಂಕೇತಿಸುವುದರಿಂದ ಹೆಸರು ಬದಲಾವಣೆಗಳನ್ನು ನಿರ್ಣಯ ಕೈಗೊಳ್ಳಲಾಗಿದೆ ಎಂದು ಭಡೋರಿಯಾ ಹೇಳಿದರು. ಫತೇಹಾಬಾದ್ ಪಟ್ಟಣವನ್ನು ಹಿಂದೆ ಸಮುಘರ್ ಎಂದು ಕರೆಯಲಾಗುತ್ತಿತ್ತು. ಇದನ್ನು ಸಿಂಧೂರಪುರಂ ಎಂದು ಮರುನಾಮಕರಣ ಮಾಡಲು ಸೂಚಿಸಲಾಗಿದೆ.

ಫತೇಹಾಬಾದ್‌ನಲ್ಲಿರುವ ಬಾದಶಾಹಿ ಬಾಗ್ ಪ್ರದೇಶವನ್ನು ಬ್ರಹ್ಮೋಸ್ ಕ್ಷಿಪಣಿ ಮತ್ತು ಬ್ರಹ್ಮನ ಹೆಸರಿನಲ್ಲಿ ಬ್ರಹ್ಮಪುರಂ ಎಂದು ಮರುನಾಮಕರಣಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT