ಸಿಎಂ ಯೋಗಿ ಆದಿತ್ಯನಾಥ್ 
ದೇಶ

ಯೋಗಿ ನಾಡಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ! ಫತೇಹಾಬಾದ್ ಗೆ 'ಸಿಂಧೂರಪುರಂ' ಮರುನಾಮಕರಣ

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಸರು ಬದಲಾವಣೆ ರಾಜಕೀಯ ಮುಂದುವರೆದಿದೆ. ಇದೀಗ ಆಗ್ರಾದ ಫತೇಹಾಬಾದ್ ಪಟ್ಟಣ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ.

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜು ಭಡೋರಿಯಾ ಅವರು ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಿ ಸರ್ವಾನುಮತದಿಂದ ಅಂಗೀಕರಿಸಿದರು. ಇದೀಗ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ.

ಈ ಪ್ರದೇಶಗಳು ಗುಲಾಮಗಿರಿ ಸಂಕೇತಿಸುವುದರಿಂದ ಹೆಸರು ಬದಲಾವಣೆಗಳನ್ನು ನಿರ್ಣಯ ಕೈಗೊಳ್ಳಲಾಗಿದೆ ಎಂದು ಭಡೋರಿಯಾ ಹೇಳಿದರು. ಫತೇಹಾಬಾದ್ ಪಟ್ಟಣವನ್ನು ಹಿಂದೆ ಸಮುಘರ್ ಎಂದು ಕರೆಯಲಾಗುತ್ತಿತ್ತು. ಇದನ್ನು ಸಿಂಧೂರಪುರಂ ಎಂದು ಮರುನಾಮಕರಣ ಮಾಡಲು ಸೂಚಿಸಲಾಗಿದೆ.

ಫತೇಹಾಬಾದ್‌ನಲ್ಲಿರುವ ಬಾದಶಾಹಿ ಬಾಗ್ ಪ್ರದೇಶವನ್ನು ಬ್ರಹ್ಮೋಸ್ ಕ್ಷಿಪಣಿ ಮತ್ತು ಬ್ರಹ್ಮನ ಹೆಸರಿನಲ್ಲಿ ಬ್ರಹ್ಮಪುರಂ ಎಂದು ಮರುನಾಮಕರಣಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT