ಪಂಚಿರಿಮಟ್ಟಂ ಬಳಿಯ ಅರಣ್ಯ ಪ್ರದೇಶ 
ದೇಶ

ವಯನಾಡು: ಚೂರಲ್ಮಾಲಾದಲ್ಲಿ ಭಾರಿ ಮಳೆ; ಮತ್ತೆ ಪ್ರವಾಹ, ಭೂಕುಸಿತದ ಭೀತಿ!

ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ

ವಯನಾಡು: ಕಳೆದ ವರ್ಷ 200ಕ್ಕೂ ಹೆಚ್ಚು ಜನರು ಮೃತಪಟ್ಟು, ನೂರಾರು ಮಂದಿ ನಿರಾಶ್ರಿತರಾಗಿದ್ದ ಕೇರಳದ ವಯನಾಡಿನ ಮುಂಡಕ್ಕೈ, ಚೂರಲ್ಮಾಲಾ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಭಾರಿಯೂ ಪ್ರವಾಹ, ಭೂಕುಸಿತದ ಭೀತಿ ಎದುರಾಗಿದೆ.

ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ. ನವೀಕರಣ ಕಾರ್ಯಕ್ಕಾಗಿ ನದಿಯ ಎರಡೂ ದಡಗಳಲ್ಲಿ ಸಂಗ್ರಹಿಸಲಾಗಿದ್ದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಅಟ್ಟಮಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಹರಿಯುತ್ತಿದೆ.

ಬೆಟ್ಟಗಳಲ್ಲಿ ಮತ್ತೆ ಭೂಕುಸಿತಗಳು ಸಂಭವಿಸಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಯಾವುದೇ ದೃಢೀಕರಣ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಪುಂಚಿರಿಮಟ್ಟಂ ಬೆಟ್ಟದ ಅರಣ್ಯದೊಳಗೆ ಮತ್ತೆ ಭೂಕುಸಿತ ಸಂಭವಿಸಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ತಿಳಿಸಿದೆ. ಜುಲೈ 2024 ರಲ್ಲಿ ಸಂಭವಿಸಿದ ಭೂ ಕುಸಿತದಿಂದ ಮನೆ, ಮಠ ಕಳೆದುಕೊಂಡು ನೂರಾರು ಮಂದಿ ನಿರಾಶ್ರಿತರಾಗಿದ್ದರು.

ಈ ಬಾರಿಯೂ ಅದೇ ರೀತಿ ಆಗಬಹುದೆಂಬ ಭೀತಿ ಸ್ಥಳೀಯ ಜನರಲ್ಲಿ ಮನೆ ಮಾಡಿದೆ. ಗುಡ್ಡಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

ರಷ್ಯಾ ಮೇಲೂ ಡ್ರೋನ್ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!

'ನಾನು ಕೂಡ ಪರಪುರುಷನ ಜತೆ ಹೋದರೆ ಒಪ್ಪಿಕೊಳ್ಳುತ್ತಾರೆಯೇ?': ನಟ ಜಯಂ ರವಿ ವಿರುದ್ಧ ಮಾಜಿ ಪತ್ನಿ ಆರತಿ ಕಿಡಿ!

Cricket Wedding: ಬಾಲ್ಯದ ಗೆಳತಿ ವಂಶಿಕಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ Kuldeep Yadav!

SCROLL FOR NEXT