ಪಂಚಿರಿಮಟ್ಟಂ ಬಳಿಯ ಅರಣ್ಯ ಪ್ರದೇಶ 
ದೇಶ

ವಯನಾಡು: ಚೂರಲ್ಮಾಲಾದಲ್ಲಿ ಭಾರಿ ಮಳೆ; ಮತ್ತೆ ಪ್ರವಾಹ, ಭೂಕುಸಿತದ ಭೀತಿ!

ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ

ವಯನಾಡು: ಕಳೆದ ವರ್ಷ 200ಕ್ಕೂ ಹೆಚ್ಚು ಜನರು ಮೃತಪಟ್ಟು, ನೂರಾರು ಮಂದಿ ನಿರಾಶ್ರಿತರಾಗಿದ್ದ ಕೇರಳದ ವಯನಾಡಿನ ಮುಂಡಕ್ಕೈ, ಚೂರಲ್ಮಾಲಾ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಭಾರಿಯೂ ಪ್ರವಾಹ, ಭೂಕುಸಿತದ ಭೀತಿ ಎದುರಾಗಿದೆ.

ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ. ನವೀಕರಣ ಕಾರ್ಯಕ್ಕಾಗಿ ನದಿಯ ಎರಡೂ ದಡಗಳಲ್ಲಿ ಸಂಗ್ರಹಿಸಲಾಗಿದ್ದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಅಟ್ಟಮಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಹರಿಯುತ್ತಿದೆ.

ಬೆಟ್ಟಗಳಲ್ಲಿ ಮತ್ತೆ ಭೂಕುಸಿತಗಳು ಸಂಭವಿಸಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಯಾವುದೇ ದೃಢೀಕರಣ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಪುಂಚಿರಿಮಟ್ಟಂ ಬೆಟ್ಟದ ಅರಣ್ಯದೊಳಗೆ ಮತ್ತೆ ಭೂಕುಸಿತ ಸಂಭವಿಸಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ತಿಳಿಸಿದೆ. ಜುಲೈ 2024 ರಲ್ಲಿ ಸಂಭವಿಸಿದ ಭೂ ಕುಸಿತದಿಂದ ಮನೆ, ಮಠ ಕಳೆದುಕೊಂಡು ನೂರಾರು ಮಂದಿ ನಿರಾಶ್ರಿತರಾಗಿದ್ದರು.

ಈ ಬಾರಿಯೂ ಅದೇ ರೀತಿ ಆಗಬಹುದೆಂಬ ಭೀತಿ ಸ್ಥಳೀಯ ಜನರಲ್ಲಿ ಮನೆ ಮಾಡಿದೆ. ಗುಡ್ಡಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT