ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಧಂಪುರ್ ಬಳಿ ಎನ್ ಕೌಂಟರ್; ನಾಲ್ವರು ಜೆಇಎಂ ಉಗ್ರರಿಗಾಗಿ ಭಾರಿ ಶೋಧ!

ಬಸಂತ್ ಗಢ್ ದ ಬಿಹಾಲಿ ದುರ್ಗಮ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರಿಂದ ಇಂದು ಬೆಳಗ್ಗೆಯಿಂದ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ

ಉದ್ಧಂಪುರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಅರಣ್ಯ ಪ್ರದೇಶವೊಂದರಲ್ಲಿ ನಾಲ್ವರು ಜೈಶ್ ಇ ಮೊಹಮ್ಮದ್ ಅಡಗಿರುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸುತ್ತಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಸಂತ್ ಗಢ್ ದ ಬಿಹಾಲಿ ದುರ್ಗಮ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರಿಂದ ಇಂದು ಬೆಳಗ್ಗೆಯಿಂದ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭಾರಿ ಮಳೆ ಮತ್ತು ಹಿಮದ ನಡುವೆ ಭಾರಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಳಗ್ಗೆ 8-30ರ ಸುಮಾರಿನಲ್ಲಿ ಉಗ್ರರನ್ನು ಸಂಪರ್ಕಿಸಲು ಸಾಧ್ಯವಾಯಿತು. ನಾಲ್ವರು ಉಗ್ರರು ಇರುವುದಾಗಿ ತಿಳಿದುಬಂದಿದೆ. ಅವರಿಗಾಗಿ ಒಂದು ವರ್ಷದಿಂದ ಶೋಧ ನಡೆಸುತ್ತಿದ್ದೇವು ಎಂದು ಜಮ್ಮು ವಲಯದ ಐಜಿಪಿ ಭೀಮ್ ಸೇನ್ ತುಟಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ (White Knight Corps) ತನ್ನ ಎಕ್ಸ್ ಖಾತೆಯಲ್ಲಿ ಈ ವಿಚಾರವನ್ನು ಪ್ರಕಟಿಸಿದೆ. ಉಗ್ರರ ವಿರುದ್ಧದ ಈ ಕಾರ್ಯಾಚರಣೆಗೆ ‘ಆಪರೇಷನ್ ಬಿಹಾಲಿ’ ಎಂದು ಹೆಸರಿಡಲಾಗಿದೆ. ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿಯ ಮೇರೆಗೆ ಉಗ್ರರ ಅಡಗುದಾಣದ ಮೇಲೆ ನಾವು ದಾಳಿ ಮಾಡಿದ್ದೇವೆ. ಬಸಂತ್ ಗಢ್ ಗೆ ಜೂ. 26ರ ನಸುಕಿನಲ್ಲೇ ಆಗಮಿಸಿದ್ದ ನಮ್ಮ ಪಡೆ, ಉಗ್ರರ ಇರುವಿಕೆಯನ್ನು ಖಚಿತಪಡಿಸಿಕೊಂಡು ಆನಂತರ ಅವರನ್ನು ಬಂಧಿಸಲು ಮುಂದಾದಾಗ ಗುಂಡಿನ ಚಕಮಕಿ ನಡೆಯಿತು ಎಂದು ವಿವರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT