ನಿತೇಶ್ ರಾಣೆ  
ದೇಶ

ಮಹಾ ಸಚಿವ ನಿತೇಶ್ ರಾಣೆ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಪ್ರಕರಣದ ವಿಚಾರಣೆಗೆ ಹಾಜರಾಗಲು ವಿಫಲರಾದ ಸಚಿವ ನಿತೇಶ್ ರಾಣೆ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿದೆ.

ಮುಂಬೈ: 2023 ರಲ್ಲಿ ಶಿವಸೇನಾ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ನಾಯಕ ಸಂಜಯ್ ರಾವತ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯ ಗುರುವಾರ ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ಪ್ರಕರಣದ ವಿಚಾರಣೆಗೆ ಹಾಜರಾಗಲು ವಿಫಲರಾದ ಸಚಿವ ನಿತೇಶ್ ರಾಣೆ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿದೆ.

ಜೂನ್ 2 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ, ಬಿಜೆಪಿ ನಾಯಕ ರಾಣೆ, ಹಾಜರಾತಿಯಿಂದ ಶಾಶ್ವತ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು.

ಆದಾಗ್ಯೂ, ಗುರುವಾರ, ಮಜ್ಗಾಂವ್ ಜೆಎಂಎಫ್ ಸಿ ನ್ಯಾಯಾಧೀಶ ಎ ಎ ಕುಲಕರ್ಣಿ ಅವರು, ಮಹಾರಾಷ್ಟ್ರ ಸಚಿವರಿಗೆ ಶಾಶ್ವತ ವಿನಾಯಿತಿ ನಿರಾಕರಿಸಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಬಳಿಕ ಪ್ರಕರಣದ ವಿಚಾರಣೆಯನ್ನು ಜುಲೈ 18 ಕ್ಕೆ ಮುಂದೂಡಲಾಗಿದೆ.

ಇದಕ್ಕೂ ಮೊದಲು, ಪ್ರಕರಣದ ವಿಚಾರಣೆಯಲ್ಲಿ ಹಾಜರಾಗಲು ವಿಫಲರಾದ ಬಿಜೆಪಿ ನಾಯಕ ರಾಣೆ ವಿರುದ್ಧ ನ್ಯಾಯಾಲಯವು ಹಲವು ವಾರಂಟ್‌ಗಳನ್ನು ಹೊರಡಿಸಿತ್ತು.

ಮೇ 2023 ರಲ್ಲಿ, ಮಾಜಿ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರ ನಿತೇಶ್ ರಾಣೆ ಅವರು, ಸಂಜಯ್ ರಾವತ್ ಅವರನ್ನು 'ಹಾವು' ಎಂದು ಕರೆದಿದ್ದರು. ಅವರು ಉದ್ಧವ್ ಠಾಕ್ರೆಯನ್ನು ತೊರೆದು ಆ ವರ್ಷದ ಜೂನ್ ವೇಳೆಗೆ(ಅವಿಭಜಿತ) ಎನ್ ಸಿಪಿ ಸೇರುತ್ತಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT