ದತ್ತಾತ್ರೇಯ ಹೊಸಬಾಳೆ 
ದೇಶ

ಸಂವಿಧಾನದಿಂದ 'ಸಮಾಜವಾದಿ', 'ಜಾತ್ಯತೀತ' ಪದಗಳನ್ನು ತೆಗೆದುಹಾಕಿ: RSS

ತುರ್ತು ಪರಿಸ್ಥಿತಿಯ ದಿನಗಳು ದೊಡ್ಡ ಪ್ರಮಾಣದಲ್ಲಿ ಬಲವಂತದ ಸಂತಾನಹರಣಕ್ಕೂ ಸಾಕ್ಷಿಯಾದವು ಎಂದು ಆರ್‌ಎಸ್‌ಎಸ್ ನಾಯಕ ಹೇಳಿದ್ದಾರೆ.

ನವದೆಹಲಿ: 50 ವರ್ಷಗಳ ಹಿಂದೆ ಇಂದಿರಾ ಗಾಂಧಿ ಸರ್ಕಾರ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಗುರುವಾರ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹೊಸಬಾಳೆ, ಹಿಂದಿನ ಕಾಂಗ್ರೆಸ್ ಸರ್ಕಾರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದ ಪೀಠಿಕೆಯಲ್ಲಿ ಸೇರಿಸಿದ ಸಮಾಜವಾದಿ ಮತ್ತು ಜಾತ್ಯತೀತ ಎಂಬ ಎರಡು ಪದಗಳನ್ನು ತೆಗೆದುಹಾಕಬೇಕೆಂದು ಬಲವಾದ ವಾದ ಮಂಡಿಸಿದರು.

ಜೂನ್ 25, 1975 ರಂದು ಘೋಷಿಸಲಾದ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿಕೊಂಡ ಹೊಸಬಾಳೆ, ಆ ಅವಧಿಯಲ್ಲಿ ಸಾವಿರಾರು ಜನರನ್ನು ಜೈಲಿಗೆ ಹಾಕಲಾಯಿತು ಮತ್ತು ಚಿತ್ರಹಿಂಸೆ ನೀಡಲಾಯಿತು. ಅಲ್ಲದೆ ನ್ಯಾಯಾಂಗ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಸಹ ಮೊಟಕುಗೊಳಿಸಲಾಗಿತ್ತು ಎಂದರು.

ತುರ್ತು ಪರಿಸ್ಥಿತಿಯ ದಿನಗಳು ದೊಡ್ಡ ಪ್ರಮಾಣದಲ್ಲಿ ಬಲವಂತದ ಸಂತಾನಹರಣಕ್ಕೂ ಸಾಕ್ಷಿಯಾದವು ಎಂದು ಆರ್‌ಎಸ್‌ಎಸ್ ನಾಯಕ ಹೇಳಿದ್ದಾರೆ.

"ಅಂತಹ ಕೆಲಸಗಳನ್ನು ಮಾಡಿದವರು ಇಂದು ಸಂವಿಧಾನದ ಪ್ರತಿಯೊಂದಿಗೆ ತಿರುಗಾಡುತ್ತಿದ್ದಾರೆ. ಅವರು ಇನ್ನೂ ಕ್ಷಮೆಯಾಚಿಸಿಲ್ಲ... ಮೊದಲು ಕ್ಷಮೆಯಾಚಿಸಿ" ಎಂದು ಕಾಂಗ್ರೆಸ್ ಗೆ ಆಗ್ರಹಿಸಿದರು.

"ನಿಮ್ಮ ಪೂರ್ವಜರು ತುರ್ತು ಪರಿಸ್ಥಿತಿಯನ್ನು ಹೇರಿದರು... ಇದಕ್ಕಾಗಿ ನೀವು ದೇಶಕ್ಕೆ ಕ್ಷಮೆಯಾಚಿಸಬೇಕು" ಎಂದು ಹೊಸಬಾಳೆ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ