ಅಡ್ಡಾದಿಡ್ಡಿ ಓಡಿದ ಆನೆ 
ದೇಶ

ರಥಯಾತ್ರೆ ವೇಳೆ ಅಡ್ಡಾದಿಡ್ಡಿ ಓಡಿದ ಆನೆಗಳು: ಹಲವರಿಗೆ ಗಾಯ; Video ವೈರಲ್

ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ.

ಅಹ್ಮದಾಬಾದ್: ಅಹಮದಾಬಾದ್​ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ ಕೂಡ ಆನೆ ಹಿಂದೆ ಓಡಿದ್ದು, ಆನೆಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಆದರೆ, ನಿಯಂತ್ರಣಕ್ಕೆ ಸಿಕ್ಕಿಲ್ಲ. ಬಳಿಕ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರದೇಶವನ್ನು ತೆರವುಗೊಳಿಸಿದ್ದಾರೆ. ಹೀಗಾಗಿ. ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಬಳಿಕ ವೈದ್ಯರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ಆನೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಆನೆಯ ಓಡಾಟದಿಂದ ಉಂಟಾದ ಕಾಲ್ತುಳಿತದಲ್ಲಿ ಸಿಲುಕಿಕೊಳ್ಳದೆ ಕೆಲವರು ಅದೃಷ್ಟವಶಾತ್ ತಪ್ಪಿಸಿಕೊಂಡಿದ್ದಾರೆ.

ಅಹಮದಾಬಾದ್ ನಗರದ ಪ್ರಸಿದ್ಧ ರಥೋತ್ಸವದಲ್ಲಿ, ಆನೆಗಳು ಯಾವಾಗಲೂ ಆಕರ್ಷಣೆಯ ಕೇಂದ್ರ ಬಿಂದುವಾಗಿರುತ್ತವೆ. ಈ ಬಾರಿ ರಥೋತ್ಸವಕ್ಕಾಗಿ ಒಟ್ಟು 16 ಆನೆಗಳು ಆಗಮಿಸಿದ್ದವು. ಅದರಲ್ಲಿ ಒಂದು ಗಂಡು ಆನೆ ಮಾನಸಿಕ ಅಸಮತೋಲನದಿಂದಾಗಿ ಇದ್ದಕ್ಕಿದ್ದಂತೆ ಓಡಲು ಪ್ರಾರಂಭಿಸಿದೆ. ಇದು ಸುತ್ತಮುತ್ತಲಿನ ಜನಸಮೂಹದಲ್ಲಿ ಭಯಭೀತತೆಯನ್ನು ಉಂಟುಮಾಡಿದೆ. ಸದ್ಯ ಭಯಭೀತಗೊಂಡಿದ್ದ ಆನೆ ಅರಣ್ಯ ಇಲಾಖೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT