ಕಸದ ರಾಶಿಯಲ್ಲಿ ಪತ್ತೆಯಾದ ಅಜ್ಜಿ 
ದೇಶ

ಮುಂಬೈ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದಿದ್ದ ಮೊಮ್ಮಗನ ಬಂಧನ!

ಸುಮಾರು 70 ವರ್ಷದ ವೃದ್ಧ ಮಹಿಳೆ ಜೂನ್ 22 ರಂದು ಬೆಳಿಗ್ಗೆ ಅರೆ ಕಾಲೋನಿಯಲ್ಲಿನ ಕಸದ ರಾಶಿ ಬಳಿ ಸಂಕಷ್ಟದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮುಂಬೈ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದಿದ್ದ ಆರೋಪದ ಮೇಲೆ ಆಕೆಯ 33 ವರ್ಷದ ಮೊಮ್ಮಗ ಹಾಗೂ ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 70 ವರ್ಷದ ವೃದ್ಧ ಮಹಿಳೆ ಜೂನ್ 22 ರಂದು ಬೆಳಿಗ್ಗೆ ಅರೆ ಕಾಲೋನಿಯಲ್ಲಿನ ಕಸದ ರಾಶಿ ಬಳಿ ಸಂಕಷ್ಟದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೊಮ್ಮಗ ಸಾಗರ್ ಶೆವಾಲೆ (33), ಸೋದರ ಮಾವ ಬಾಬಾಸಾಹೇಬ್ ಗಾಯಕ್ವಾಡ್ (70) ಮತ್ತು ಆಟೋರಿಕ್ಷಾ ಚಾಲಕ ಸಂಜಯ್ ಕದ್ರೇಶಮ್ (27) ಅವರು ವೃದ್ಧ ಮಹಿಳೆಯನ್ನು ಅಲ್ಲಿ ಬಿಟ್ಟು ಹೋಗಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಜ್ಜಿಯೇ ಮನೆ ಬಿಟ್ಟು ಹೋಗಿದ್ದು, ಅವರನ್ನು ನಾನು ಕಸದ ರಾಶಿಗೆ ಎಸೆದು ಬಂದಿಲ್ಲ ಎಂದು ಮೊದಲಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ ಮೊಮ್ಮಗ, ತೀವ್ರ ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿದ್ದಾನೆ.

ಈ ಮೂವರನ್ನು ಬುಧವಾರ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 125 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕಾಯ್ದೆ) ಮತ್ತು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಆರೋಪಿಗಳು ಜೂನ್ 21 ರಂದು ರಾತ್ರಿ ಮೊದಲಿಗೆ ಶತಾಬ್ದಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಯ ಅಧಿಕಾರಿಗಳು ಆಕೆಯನ್ನು ದಾಖಲಿಸಲು ನಿರಾಕರಿಸಿದಾಗ ಆರೇ ಕಾಲೋನಿಯ ಅರಣ್ಯಕ್ಕೆ ಕರೆದೊಯ್ದು ಅಲ್ಲಿಯೇ ಎಸೆದು ಬಂದಿದ್ದಾರೆ. ವೃದ್ಧ ಮಹಿಳೆ ಈಗ ನಗರದ ಜುಹು ಪ್ರದೇಶದಲ್ಲಿನ ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ; ಸಿಎಂ ಸಿದ್ದರಾಮಯ್ಯ

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ

'ಹಾಳಾದ ರಸ್ತೆಗಳು, ಗುಂಡಿಗಳು ಮತ್ತು ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರ

ACCಗೆ ಹೊಸ ತಲೆನೋವು: 'ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಅವನ ಹೆಸರು ಕೈ ಬಿಡಿ' ಎಂದು Suryakumar Yadav ಖಡಕ್ ಪಟ್ಟು!

Hyderabad Horror: ಸೇತುವೆ ಬಳಿ ನಿಗೂಢ ಚೀಲ, ನಗ್ನ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ!

SCROLL FOR NEXT