ಪ್ರಮುಖ ಆರೋಪಿ ಮನೋಜಿತ್ ಮಿಶ್ರಾ 
ದೇಶ

ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; TMC ಕಾರ್ಯಕರ್ತ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ

ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು.

ಕೋಲ್ಕತ್ತಾ: ಕಸ್ಬಾದಲ್ಲಿರುವ ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ ಆವರಣದೊಳಗೆ ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ದೂರಿನ ಪ್ರಕಾರ, ಈ ಘಟನೆ ಜೂನ್ 25 ಬುಧವಾರ ಸಂಜೆ 7:30 ರಿಂದ ರಾತ್ರಿ 10:50 ರ ನಡುವೆ ನಡೆದಿದೆ.

ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು. ಆರೋಪಿಗಳಲ್ಲಿ ಇಬ್ಬರನ್ನು ಗುರುವಾರ ಸಂಜೆ ಬಂಧಿಸಲಾಗಿದ್ದು, ಮೂರನೆಯವರನ್ನು ಮಧ್ಯರಾತ್ರಿಯ ಸುಮಾರಿಗೆ ಬಂಧಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಕಾಲೇಜಿನ ಮಾಜಿ ವಿದ್ಯಾರ್ಥಿ ಮನೋಜಿತ್ ಮಿಶ್ರಾ (31) ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ, ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖೋಪಾಧ್ಯಾಯ (20) ಬಂಧಿತ ಆರೋಪಿಗಳಾಗಿದ್ದಾರೆ.

ಮನೋಜಿತ್ ಮಿಶ್ರಾ ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛತ್ರ ಪರಿಷತ್ (TMCP) ಜೊತೆ ಸಂಬಂಧ ಹೊಂದಿದ್ದಾನೆ. ಆತನ ಫೇಸ್‌ಬುಕ್ ಪ್ರೊಫೈಲ್ ನಲ್ಲಿ TMCP ಯ ದಕ್ಷಿಣ ಕೋಲ್ಕತ್ತಾ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಎಂದು ಬರೆದುಕೊಂಡಿದ್ದಾನೆ. ಆತ ಅಲಿಪೋರ್ ನ್ಯಾಯಾಲಯದಲ್ಲಿ ಕ್ರಿಮಿನಲ್ ವಕೀಲನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾನೆ. ಇತರ ಇಬ್ಬರು ಆರೋಪಿಗಳು ಸಹ ಟಿಎಂಸಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿಪಿ ರಾಜ್ಯ ಅಧ್ಯಕ್ಷ ತೃಣಂಕೂರ್ ಭಟ್ಟಾಚಾರ್ಯ, “ತೃಣಮೂಲ ಪಕ್ಷದ ಯಾರೇ ಆದರೂ ಈ ಘಟನೆಯಲ್ಲಿ ಭಾಗಿಯಾಗಿರಲಿ ಅಥವಾ ಇಲ್ಲದಿರಲಿ, ಸೂಕ್ತ ಕ್ರಮ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ. ಆರೋಪಿತ ವ್ಯಕ್ತಿ ಪ್ರಸ್ತುತ ಕಾಲೇಜಿನ ಉದ್ಯೋಗಿ, ಆತ ವಿದ್ಯಾರ್ಥಿ ಪರಿಷತ್ತಿನೊಂದಿಗೆ ಸಂಬಂಧ ಹೊಂದಿಲ್ಲ. ಈ ಘಟನೆ ಮತ್ತು ಆರೋಪ ನಿಜವಾಗಿದ್ದರೆ, ಅವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲು ಟಿಎಂಸಿ ಹೋರಾಟ ನಡೆಸುತ್ತದೆ ಎಂದಿದ್ದಾರೆ. ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಏತನ್ಮಧ್ಯೆ, ರಾಷ್ಟ್ರೀಯ ಮಹಿಳಾ ಆಯೋಗವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ್ದು, 72 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಕೋಲ್ಕತ್ತಾ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT