ಸಾಂದರ್ಭಿಕ ಚಿತ್ರ 
ದೇಶ

ಕೃಷಿ ಉದ್ದೇಶದ 'ನೀರಿನ ಬಳಕೆ ಮೇಲೆ ತೆರಿಗೆ' ಹಾಕಲು ಕೇಂದ್ರ ಸರ್ಕಾರ ಮುಂದು!

ರಾಜ್ಯಗಳು ತೆರಿಗೆ ನಿರ್ಧರಿಸಲಿವೆ. ದುರ್ಬಳಕೆ ತಡೆಯಲು ಇದು ಅಗತ್ಯವಾಗಿದೆ.

ನವದೆಹಲಿ: ಅಂತರ್ಜಲದ ವ್ಯರ್ಥ ಮತ್ತು ದುರ್ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಈಗ ಕೃಷಿ ಉದ್ದೇಶದ ನೀರಿನ ಬಳಕೆಯ ಮೇಲೆ ತೆರಿಗೆ ವಿಧಿಸಲು ಯೋಜಿಸಿದೆ.

ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ವಿವಿಧ ರಾಜ್ಯಗಳಲ್ಲಿ 22 ಪ್ರಾಯೋಗಿಕ ಯೋಜನೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ. ಈ ಉಪಕ್ರಮದಡಿ ರೈತರಿಗೆ ಸಾಕಷ್ಟು ನೀರು ಸಿಗುತ್ತದೆ ಮತ್ತು ಅದರ ಬಳಕೆಯ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ.

ಪ್ರಾಯೋಗಿಕ ಯೋಜನೆಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ತಿಳಿಸಿದ್ದಾರೆ. ಈ ಯೋಜನೆಯಿಂದ ಕೇಂದ್ರ ಸ್ಥಳದಲ್ಲಿ ಸಾಕಷ್ಟು ನೀರನ್ನು ಒದಗಿಸಲಾಗುತ್ತದೆ. ಇದರಿಂದ ರೈತರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಅದನ್ನು ಬಳಸಿಕೊಳ್ಳಬಹುದು. ನೀರಿನ ಬಳಕೆ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ" ಎಂದು ಅವರು ವಿವರಿಸಿದ್ದಾರೆ.

ವಾರ್ಷಿಕ ಅಂತರ್ಜಲ ಹೊರತೆಗೆಯುವಿಕೆ ವರದಿಯ ಪ್ರಕಾರ, 239.16 ಶತಕೋಟಿ ಘನ ಮೀಟರ್ (BCM) ನೀರನ್ನು ಹೊರತೆಗೆಯಲಾಗುತ್ತಿದೆ. ಇದರಲ್ಲಿ ಶೇ. 87 ರಷ್ಟು ಕೃಷಿ ವಲಯ ಹೊಂದಿದೆ. ವಿವೇಚನೆಯಿಲ್ಲದ ಹೊರತೆಗೆಯುವಿಕೆ ಅಂತರ್ಜಲ ತೀವ್ರ ಕುಸಿತಕ್ಕೆ ಕಾರಣವಾಗಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ ರೂ. 1,600 ಕೋಟಿ ಅನುದಾನ ಹಂಚಿಕೆ ಮಾಡಿದೆ.

ರಾಜ್ಯಗಳು ತೆರಿಗೆ ನಿರ್ಧರಿಸಲಿವೆ. ದುರ್ಬಳಕೆ ತಡೆಯಲು ಇದು ಅಗತ್ಯವಾಗಿದೆ. ನೀರು ವ್ಯರ್ಥವಾಗುವುದನ್ನು ನಿಯಂತ್ರಿಸಲು ರಾಜ್ಯಕ್ಕಿಂತ ಸ್ಥಳೀಯ ನೀರು ಬಳಕೆದಾರರ ಸಂಘಗಳು ತೆರಿಗೆ ವಿಧಿಸಬೇಕು' ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಶೋಕ್ ಕೆ ಮೀನಾ ಹೇಳಿದರು.

ಮುಂದಿನ ವರ್ಷ ಮುಕ್ತಾಯಗೊಳ್ಳಲಿರುವ ಗಂಗಾಜಲ ಒಪ್ಪಂದದ ಕುರಿತು ಭಾರತದ ನಿಲುವು ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಪಾಟೀಲ್, ಇದು ಅಂತರರಾಷ್ಟ್ರೀಯ ಒಪ್ಪಂದವಾಗಿರುವುದರಿಂದ ದೇಶದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT