ಉಪ ರಾಷ್ಟ್ರಪತಿ ಧಂಖರ್  
ದೇಶ

ಸಂವಿಧಾನದ ಪೀಠಿಕೆ 'ಬದಲಾಯಿಸಲಾಗದು', ಆದರೆ ತುರ್ತು ಪರಿಸ್ಥಿತಿ ವೇಳೆ 'ಬದಲಾಯಿಸಲಾಗಿತ್ತು': ಉಪ ರಾಷ್ಟ್ರಪತಿ ಧಂಖರ್

ಬಿ.ಆರ್. ಅಂಬೇಡ್ಕರ್ ಅವರು ಶ್ರಮವಹಿಸಿ ಸಂವಿಧಾನ ರಚಿಸಿದ್ದು, ನಾವು ಅದರತ್ತ ಖಂಡಿತವಾಗಿಯೂ ಗಮನ ಕೇಂದ್ರೀಕರಿಸಿರಬೇಕು ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿರುವ ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ತೆಗೆದುಹಾಕಬೇಕು ಎಂದು ಆರ್ ಎಸ್ ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಹೇಳಿಕೆ ಬೆನ್ನಲ್ಲೇ ದೇಶಾದ್ಯಂತ ಈ ಕುರಿತು ಚರ್ಚೆ ನಡೆಯುತ್ತಿರುವಂತೆಯೇ ದಾಖಲೆ ನಿರ್ವಹಣೆ ದೃಷ್ಟಿಯಿಂದ 'ಸಂವಿಧಾನದ ಪ್ರಸ್ತಾಪನೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಶನಿವಾರ ಪ್ರತಿಪಾದಿಸಿದ್ದಾರೆ.

ಭಾರತವನ್ನು ಹೊರತುಪಡಿಸಿ ಬೇರೆ ಯಾವುದೇ ಸಂವಿಧಾನದ ಪೀಠಿಕೆಯು ಬದಲಾಗಿಲ್ಲ. ಆದರೆ 1976ರ 42ನೇ ಸಂವಿಧಾನ ತಿದ್ದುಪಡಿ ಕಾಯ್ದೆಯೊಂದಿಗೆ ಪೀಠಿಕೆಯನ್ನು ತಿದ್ದುಪಡಿ ಮಾಡಿದ್ದು, ಸಮಾಜವಾದಿ, ಜಾತ್ಯತೀತ ಮತ್ತು "ಸಮಗ್ರತೆ" ಪದಗಳನ್ನು ಸೇರಿಸಿದ್ದಾರೆ ಎಂದು ತಿಳಿಸಿದರು.

ಬಿ.ಆರ್. ಅಂಬೇಡ್ಕರ್ ಅವರು ಶ್ರಮವಹಿಸಿ ಸಂವಿಧಾನ ರಚಿಸಿದ್ದು, ನಾವು ಅದರತ್ತ ಖಂಡಿತವಾಗಿಯೂ ಗಮನ ಕೇಂದ್ರೀಕರಿಸಿರಬೇಕು ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.

ಇಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಧಂಖರ್, ಸಂವಿಧಾನದ ಪೀಠಿಕೆಯಲ್ಲಿನ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ತೆಗೆದುಹಾಕಬೇಕು ಎಂಬ ದತ್ತಾತ್ರೇಯ ಹೊಸಬಾಳೆ ಹೇಳಿಕೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT