ಉಪ ರಾಷ್ಟ್ರಪತಿ ಧಂಖರ್  
ದೇಶ

ಸಂವಿಧಾನದ ಪೀಠಿಕೆ 'ಬದಲಾಯಿಸಲಾಗದು', ಆದರೆ ತುರ್ತು ಪರಿಸ್ಥಿತಿ ವೇಳೆ 'ಬದಲಾಯಿಸಲಾಗಿತ್ತು': ಉಪ ರಾಷ್ಟ್ರಪತಿ ಧಂಖರ್

ಬಿ.ಆರ್. ಅಂಬೇಡ್ಕರ್ ಅವರು ಶ್ರಮವಹಿಸಿ ಸಂವಿಧಾನ ರಚಿಸಿದ್ದು, ನಾವು ಅದರತ್ತ ಖಂಡಿತವಾಗಿಯೂ ಗಮನ ಕೇಂದ್ರೀಕರಿಸಿರಬೇಕು ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿರುವ ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ತೆಗೆದುಹಾಕಬೇಕು ಎಂದು ಆರ್ ಎಸ್ ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಹೇಳಿಕೆ ಬೆನ್ನಲ್ಲೇ ದೇಶಾದ್ಯಂತ ಈ ಕುರಿತು ಚರ್ಚೆ ನಡೆಯುತ್ತಿರುವಂತೆಯೇ ದಾಖಲೆ ನಿರ್ವಹಣೆ ದೃಷ್ಟಿಯಿಂದ 'ಸಂವಿಧಾನದ ಪ್ರಸ್ತಾಪನೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಶನಿವಾರ ಪ್ರತಿಪಾದಿಸಿದ್ದಾರೆ.

ಭಾರತವನ್ನು ಹೊರತುಪಡಿಸಿ ಬೇರೆ ಯಾವುದೇ ಸಂವಿಧಾನದ ಪೀಠಿಕೆಯು ಬದಲಾಗಿಲ್ಲ. ಆದರೆ 1976ರ 42ನೇ ಸಂವಿಧಾನ ತಿದ್ದುಪಡಿ ಕಾಯ್ದೆಯೊಂದಿಗೆ ಪೀಠಿಕೆಯನ್ನು ತಿದ್ದುಪಡಿ ಮಾಡಿದ್ದು, ಸಮಾಜವಾದಿ, ಜಾತ್ಯತೀತ ಮತ್ತು "ಸಮಗ್ರತೆ" ಪದಗಳನ್ನು ಸೇರಿಸಿದ್ದಾರೆ ಎಂದು ತಿಳಿಸಿದರು.

ಬಿ.ಆರ್. ಅಂಬೇಡ್ಕರ್ ಅವರು ಶ್ರಮವಹಿಸಿ ಸಂವಿಧಾನ ರಚಿಸಿದ್ದು, ನಾವು ಅದರತ್ತ ಖಂಡಿತವಾಗಿಯೂ ಗಮನ ಕೇಂದ್ರೀಕರಿಸಿರಬೇಕು ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.

ಇಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಧಂಖರ್, ಸಂವಿಧಾನದ ಪೀಠಿಕೆಯಲ್ಲಿನ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ತೆಗೆದುಹಾಕಬೇಕು ಎಂಬ ದತ್ತಾತ್ರೇಯ ಹೊಸಬಾಳೆ ಹೇಳಿಕೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT