ಪ್ರಧಾನಿ ನರೇಂದ್ರ ಮೋದಿ 
ದೇಶ

Mann Ki Baat: ಸಾಮಾಜಿಕ ಭದ್ರತಾ ಯೋಜನೆಗಳಿಂದ 95 ಕೋಟಿ ಜನರು ಪ್ರಯೋಜನ ಪಡೆಯುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ತಮ್ಮ ಮಾಸಿಕ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ವರದಿಯನ್ನು ಉಲ್ಲೇಖಿಸಿದರು.

ನವದೆಹಲಿ: ಸುಮಾರು 95 ಕೋಟಿ ಜನರು ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, 2015 ರವರೆಗೆ ಸರ್ಕಾರಿ ಯೋಜನೆಗಳು 25 ಕೋಟಿಗಿಂತ ಕಡಿಮೆ ಜನರನ್ನು ತಲುಪಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ,

ತಮ್ಮ ಮಾಸಿಕ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ವರದಿಯನ್ನು ಉಲ್ಲೇಖಿಸಿದರು. ಭಾರತದ ಜನಸಂಖ್ಯೆಯ ಶೇ 64ಕ್ಕಿಂತ ಹೆಚ್ಚು ಜನರು ಒಂದಲ್ಲ ಒಂದು ರೀತಿಯ ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ ಎಂದರು.

'ಸದ್ಯ ಭಾರತದ ಹೆಚ್ಚಿನ ಜನರು ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಮತ್ತು ಇತ್ತೀಚೆಗೆ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ (ಐಎಲ್ಒ) ಬಹಳ ಮುಖ್ಯವಾದ ವರದಿ ಹೊರಬಂದಿದೆ. ಭಾರತದ ಜನಸಂಖ್ಯೆಯ ಶೇ 64 ಕ್ಕಿಂತ ಹೆಚ್ಚು ಜನರು ಈಗ ಖಂಡಿತವಾಗಿಯೂ ಒಂದಲ್ಲ ಒಂದು ರೀತಿಯ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ವಿಶ್ವದ ಅತಿದೊಡ್ಡ ವರದಿಗಳಲ್ಲಿ ಒಂದಾಗಿದೆ' ಎಂದು ಮೋದಿ ಹೇಳಿದರು.

'ಇಂದು, ದೇಶದ ಸುಮಾರು 95 ಕೋಟಿ ಜನರು ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಆದರೆ, 2015 ರವರೆಗೆ, ಸರ್ಕಾರಿ ಯೋಜನೆಗಳು 25 ಕೋಟಿಗಿಂತ ಕಡಿಮೆ ಜನರನ್ನು ತಲುಪುತ್ತಿದ್ದವು. ಈಗ ಆರೋಗ್ಯದಿಂದ ಸಾಮಾಜಿಕ ಭದ್ರತೆಯವರೆಗೆ, ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುತ್ತಿದೆ' ಎಂದರು.

'ಇದು ಸಾಮಾಜಿಕ ನ್ಯಾಯದ ಒಂದು ಉತ್ತಮ ಚಿತ್ರಣವೂ ಆಗಿದೆ. ಈ ಯಶಸ್ಸುಗಳು ಮುಂಬರುವ ಸಮಯಗಳು ಇನ್ನೂ ಉತ್ತಮವಾಗುತ್ತವೆ ಎಂಬ ನಂಬಿಕೆಯನ್ನು ಹುಟ್ಟುಹಾಕಿವೆ; ಭಾರತವು ಪ್ರತಿ ಹಂತದಲ್ಲೂ ಇನ್ನಷ್ಟು ಬಲಶಾಲಿಯಾಗುತ್ತದೆ' ಎಂದು ಮೋದಿ ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಟ್ರಾಕೋಮಾ ಮುಕ್ತ ಎಂದು ಘೋಷಿಸಿರುವುದನ್ನು ಪ್ರಧಾನಿಯವರು 'ಗಮನಾರ್ಹ ಮೈಲಿಗಲ್ಲು' ಎಂದು ಶ್ಲಾಘಿಸಿದರು ಮತ್ತು ಈ ಯಶಸ್ಸಿಗೆ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದರು.

ಟ್ರಕೋಮಾ ಒಂದು ಸಾಂಕ್ರಾಮಿಕ ಬ್ಯಾಕ್ಟೀರಿಯಾದ ಸೋಂಕಾಗಿದ್ದು, ಇದು ವಿಶ್ವದಾದ್ಯಂತ ತಡೆಗಟ್ಟಬಹುದಾದ ಕುರುಡುತನಕ್ಕೆ ಪ್ರಮುಖ ಕಾರಣವಾಗಿದೆ.

ವಿವಿಧ ಧಾರ್ಮಿಕ ಯಾತ್ರೆಗಳಲ್ಲಿ ಭಾಗವಹಿಸುತ್ತಿರುವ ಎಲ್ಲ ಅದೃಷ್ಟಶಾಲಿ ಭಕ್ತರಿಗೆ ಶುಭಾಶಯಗಳು. ಈ ಯಾತ್ರೆಗಳನ್ನು ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಮಾಡುವಲ್ಲಿ ಸೇವಾ ಮನೋಭಾವದಿಂದ ತೊಡಗಿರುವವರನ್ನು ನಾನು ಶ್ಲಾಘಿಸುತ್ತೇನೆ. ಭಾರತದಾದ್ಯಂತ ವ್ಯಕ್ತಿಗಳು ಮತ್ತು ಸಮುದಾಯಗಳು ಬದಲಾವಣೆಯ ವೇಗವರ್ಧಕಗಳಾಗುತ್ತಿವೆ. ಪ್ರಕೃತಿಯನ್ನು ರಕ್ಷಿಸುವುದಷ್ಟೇ ಅಲ್ಲ, ಮುಂದಿನ ಪೀಳಿಗೆಗೆ ಭವಿಷ್ಯವನ್ನು ಕಾಪಾಡುವುದೂ ನಮ್ಮ ಅಚಲ ಬದ್ಧತೆಯಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT