ಪ್ರಧಾನಿ ನರೇಂದ್ರ ಮೋದಿ 
ದೇಶ

Mann Ki Baat: ಸಾಮಾಜಿಕ ಭದ್ರತಾ ಯೋಜನೆಗಳಿಂದ 95 ಕೋಟಿ ಜನರು ಪ್ರಯೋಜನ ಪಡೆಯುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ತಮ್ಮ ಮಾಸಿಕ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ವರದಿಯನ್ನು ಉಲ್ಲೇಖಿಸಿದರು.

ನವದೆಹಲಿ: ಸುಮಾರು 95 ಕೋಟಿ ಜನರು ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, 2015 ರವರೆಗೆ ಸರ್ಕಾರಿ ಯೋಜನೆಗಳು 25 ಕೋಟಿಗಿಂತ ಕಡಿಮೆ ಜನರನ್ನು ತಲುಪಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ,

ತಮ್ಮ ಮಾಸಿಕ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ವರದಿಯನ್ನು ಉಲ್ಲೇಖಿಸಿದರು. ಭಾರತದ ಜನಸಂಖ್ಯೆಯ ಶೇ 64ಕ್ಕಿಂತ ಹೆಚ್ಚು ಜನರು ಒಂದಲ್ಲ ಒಂದು ರೀತಿಯ ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ ಎಂದರು.

'ಸದ್ಯ ಭಾರತದ ಹೆಚ್ಚಿನ ಜನರು ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಮತ್ತು ಇತ್ತೀಚೆಗೆ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ (ಐಎಲ್ಒ) ಬಹಳ ಮುಖ್ಯವಾದ ವರದಿ ಹೊರಬಂದಿದೆ. ಭಾರತದ ಜನಸಂಖ್ಯೆಯ ಶೇ 64 ಕ್ಕಿಂತ ಹೆಚ್ಚು ಜನರು ಈಗ ಖಂಡಿತವಾಗಿಯೂ ಒಂದಲ್ಲ ಒಂದು ರೀತಿಯ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ವಿಶ್ವದ ಅತಿದೊಡ್ಡ ವರದಿಗಳಲ್ಲಿ ಒಂದಾಗಿದೆ' ಎಂದು ಮೋದಿ ಹೇಳಿದರು.

'ಇಂದು, ದೇಶದ ಸುಮಾರು 95 ಕೋಟಿ ಜನರು ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಆದರೆ, 2015 ರವರೆಗೆ, ಸರ್ಕಾರಿ ಯೋಜನೆಗಳು 25 ಕೋಟಿಗಿಂತ ಕಡಿಮೆ ಜನರನ್ನು ತಲುಪುತ್ತಿದ್ದವು. ಈಗ ಆರೋಗ್ಯದಿಂದ ಸಾಮಾಜಿಕ ಭದ್ರತೆಯವರೆಗೆ, ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುತ್ತಿದೆ' ಎಂದರು.

'ಇದು ಸಾಮಾಜಿಕ ನ್ಯಾಯದ ಒಂದು ಉತ್ತಮ ಚಿತ್ರಣವೂ ಆಗಿದೆ. ಈ ಯಶಸ್ಸುಗಳು ಮುಂಬರುವ ಸಮಯಗಳು ಇನ್ನೂ ಉತ್ತಮವಾಗುತ್ತವೆ ಎಂಬ ನಂಬಿಕೆಯನ್ನು ಹುಟ್ಟುಹಾಕಿವೆ; ಭಾರತವು ಪ್ರತಿ ಹಂತದಲ್ಲೂ ಇನ್ನಷ್ಟು ಬಲಶಾಲಿಯಾಗುತ್ತದೆ' ಎಂದು ಮೋದಿ ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಟ್ರಾಕೋಮಾ ಮುಕ್ತ ಎಂದು ಘೋಷಿಸಿರುವುದನ್ನು ಪ್ರಧಾನಿಯವರು 'ಗಮನಾರ್ಹ ಮೈಲಿಗಲ್ಲು' ಎಂದು ಶ್ಲಾಘಿಸಿದರು ಮತ್ತು ಈ ಯಶಸ್ಸಿಗೆ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದರು.

ಟ್ರಕೋಮಾ ಒಂದು ಸಾಂಕ್ರಾಮಿಕ ಬ್ಯಾಕ್ಟೀರಿಯಾದ ಸೋಂಕಾಗಿದ್ದು, ಇದು ವಿಶ್ವದಾದ್ಯಂತ ತಡೆಗಟ್ಟಬಹುದಾದ ಕುರುಡುತನಕ್ಕೆ ಪ್ರಮುಖ ಕಾರಣವಾಗಿದೆ.

ವಿವಿಧ ಧಾರ್ಮಿಕ ಯಾತ್ರೆಗಳಲ್ಲಿ ಭಾಗವಹಿಸುತ್ತಿರುವ ಎಲ್ಲ ಅದೃಷ್ಟಶಾಲಿ ಭಕ್ತರಿಗೆ ಶುಭಾಶಯಗಳು. ಈ ಯಾತ್ರೆಗಳನ್ನು ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಮಾಡುವಲ್ಲಿ ಸೇವಾ ಮನೋಭಾವದಿಂದ ತೊಡಗಿರುವವರನ್ನು ನಾನು ಶ್ಲಾಘಿಸುತ್ತೇನೆ. ಭಾರತದಾದ್ಯಂತ ವ್ಯಕ್ತಿಗಳು ಮತ್ತು ಸಮುದಾಯಗಳು ಬದಲಾವಣೆಯ ವೇಗವರ್ಧಕಗಳಾಗುತ್ತಿವೆ. ಪ್ರಕೃತಿಯನ್ನು ರಕ್ಷಿಸುವುದಷ್ಟೇ ಅಲ್ಲ, ಮುಂದಿನ ಪೀಳಿಗೆಗೆ ಭವಿಷ್ಯವನ್ನು ಕಾಪಾಡುವುದೂ ನಮ್ಮ ಅಚಲ ಬದ್ಧತೆಯಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT