ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ 
ದೇಶ

ವಜೀರಿಸ್ತಾನ್ ದಾಳಿಗೆ ಪಾಕಿಸ್ತಾನ ಆರೋಪ: ತಳ್ಳಿಹಾಕಿದ ಭಾರತ

ನಿನ್ನೆ ನಡೆದ ಈ ದಾಳಿಯಲ್ಲಿ ಕನಿಷ್ಠ 13 ಭದ್ರತಾ ಸಿಬ್ಬಂದಿ ಮೃತಪಟ್ಟು 24 ಜನರು ಗಾಯಗೊಂಡರು.

ಖೈಬರ್ ಪಖ್ತುಂಖ್ವಾದ ವಜೀರಿಸ್ತಾನ್ ಪ್ರದೇಶದಲ್ಲಿ ನಡೆದ ಮಾರಕ ಆತ್ಮಹತ್ಯಾ ಬಾಂಬ್ ದಾಳಿಗೆ ಸಂಬಂಧ ಕಲ್ಪಿಸುವ ಪಾಕಿಸ್ತಾನ ಪ್ರಯತ್ನವನ್ನು ಭಾರತ ಬಲವಾಗಿ ತಿರಸ್ಕರಿಸಿದೆ, ಪಾಕಿಸ್ತಾನದ ಆರೋಪಗಳು ಆಧಾರರಹಿತವಾಗಿವೆ ಎಂದು ಹೇಳಿದೆ.

ನಿನ್ನೆ ನಡೆದ ಈ ದಾಳಿಯಲ್ಲಿ ಕನಿಷ್ಠ 13 ಭದ್ರತಾ ಸಿಬ್ಬಂದಿ ಮೃತಪಟ್ಟು 24 ಜನರು ಗಾಯಗೊಂಡರು. ಪಾಕಿಸ್ತಾನ ಸೇನೆಯು ಈ ದಾಳಿಯಲ್ಲಿ ಭಾರತ ಭಾಗಿಯಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಇದಕ್ಕೆ ಸರಿಯಾದ ತಿರುಗೇಟು ನೀಡಿರುವ ಭಾರತ ವಿದೇಶಾಂಗ ಸಚಿವಾಲಯ (MEA) ಆರೋಪಗಳನ್ನು ಖಂಡಿಸಿತು. ವಜೀರಿಸ್ತಾನ್ ದಾಳಿಯ ಜವಾಬ್ದಾರಿಯನ್ನು ಭಾರತಕ್ಕೆ ಹೊರಿಸಿ ಪಾಕಿಸ್ತಾನ ಸೇನೆಯ ಅಧಿಕೃತ ಹೇಳಿಕೆಯನ್ನು ನಾವು ನೋಡಿದ್ದೇವೆ. ನಾವು ಈ ಹೇಳಿಕೆಯನ್ನು ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನವು ಆಪಾದನೆಯನ್ನು ಭಾರತದ ಮೇಲೆ ಹೊರಿಸುವ ಬದಲು ತನ್ನದೇ ಗಡಿಯೊಳಗಿನ ಭಯೋತ್ಪಾದನೆಯನ್ನು ನಿಭಾಯಿಸುವತ್ತ ಗಮನಹರಿಸಬೇಕು ಎಂದು ಭಾರತ ಪುನರುಚ್ಚರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!