ತೇಜಸ್ವಿ ಯಾದವ್ 
ದೇಶ

ಬಿಹಾರ: ಮಹಾಘಟ್ ಬಂಧನ್ ಅಧಿಕಾರಕ್ಕೆ ಬಂದ ಮೇಲೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ- ತೇಜಸ್ವಿ ಯಾದವ್

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮತ್ತು ರಾಜ್ಯದಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರ ತ್ಯಾಗ ಬಲಿದಾನದಿಂದಲೇ ಎಂಬುದನ್ನು ನೆನಪಿಸಿಕೊಳ್ಳಬೇಕು.

ಪಾಟ್ನಾ: ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ಸರ್ಕಾರ ತೊಲಗುವ ಹಾದಿಯಲ್ಲಿದ್ದು, ಮಹಾಘಟ್ ಬಂಧನ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನರೇಂದ್ರ ಮೋದಿ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.

ಇಲ್ಲಿನ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ 'ವಕ್ಫ್ ಉಳಿಸಿ, ಸಂವಿಧಾನ ಉಳಿಸಿ' ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, ಆರ್‌ಜೆಡಿ ಈ ಕಾನೂನನ್ನು ವಿರೋಧಿಸುತ್ತದೆ ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ನಮ್ಮ ಸಂಸದರು ಇದನ್ನು ವಿರೋಧಿಸಿದ್ದು, ಕಾಯ್ದೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದೇವೆ ಎಂದು ತಿಳಿಸಿದರು.

ಎನ್‌ಡಿಎ ಸರ್ಕಾರ ತೊಲಗುವ ಹಾದಿಯಲ್ಲಿದೆ ಎಂಬುದನ್ನು ನೆನಪಿಟ್ಟುಕೊಳ್ಳಲು ರಾಜ್ಯದ ಮುಸ್ಲಿಂ ಸಹೋದರರಿಗೆ ಹೇಳುತ್ತೇನೆ. ನವೆಂಬರ್‌ನಲ್ಲಿ ರಾಜ್ಯದಲ್ಲಿ ಹೊಸ ಬಡವರ ಪರ ಸರ್ಕಾರವನ್ನು ಸ್ಥಾಪಿಸಲಾಗುವುದು. ಅದು ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಲಿದೆ ಎಂದು ಹೇಳಿದರು.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮತ್ತು ರಾಜ್ಯದಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರ ತ್ಯಾಗ ಬಲಿದಾನದಿಂದಲೇ ಎಂಬುದನ್ನು ನೆನಪಿಸಿಕೊಳ್ಳಬೇಕು. ದೇಶ ನನ್ನ ತಂದೆಯ ಆಸ್ತಿ ಎಂಬಂತೆ ಯಾರೂ ನಡೆದುಕೊಳ್ಳಬಾರದು ಎಂದು ವಾಗ್ದಾಳಿ ನಡೆಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಸುವ ಮೂಲಕ ಬಿಜೆಪಿಗೆ ನೆರವಾಗುವ ಚುನಾವಣಾ ಆಯೋಗದ ಪ್ರಯತ್ನದ ವಿರುದ್ಧ ಜಾಗರೂಕರಾಗಿರಿ. ಅದರ ವಿರುದ್ಧ ನಾವು ಹೋರಾಡುತ್ತೇವೆ. ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪಿತೂರಿ ಯತ್ನವನ್ನು ವಿಫಲಗೊಳಿಸಬೇಕು ಎಂದು ಯಾದವ್ ರ‍್ಯಾಲಿಯಲ್ಲಿ ಪಾಲ್ಗೊಂಡ ಜನರಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!

Cricket: ಕೇವಲ 11 ರನ್ ಗೆ 3 ವಿಕೆಟ್; ಗೆಲುವಿನ ಸನಿಹ ಬಂದಿದ್ದ ದಕ್ಷಿಣ ಆಫ್ರಿಕಾ ಸೋಲಿನಲ್ಲೂ ದಾಖಲೆಗಳ ಸುರಿಮಳೆ!

'ಆ ಹಸಿವು ಇನ್ನೂ ಇದೆ.. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ': Virat kohli ಖಡಕ್ ಸಂದೇಶ! ಟೆಸ್ಟ್ ಕ್ರಿಕೆಟ್ ಗೆ ಕೊಹ್ಲಿ ವಾಪಸ್?

SCROLL FOR NEXT