ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿರುವುದು. 
ದೇಶ

ತೆಲಂಗಾಣ: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್‌ ಸ್ಫೋಟ: 12 ಕಾರ್ಮಿಕರ ಸಾವು, 34 ಮಂದಿಗೆ ಗಾಯ; Video

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 12 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 34ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂಬ ಶಂಕೆಗಳು ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT