ಸಾಂದರ್ಭಿಕ ಚಿತ್ರ 
ದೇಶ

IAS ಅಧಿಕಾರಿಯಂತೆ ನಟನೆ: 'ಭಾರತ ಸರ್ಕಾರ' ಪ್ಲೇಟ್ ಕಾರಿನಲ್ಲಿ ಪ್ರಯಾಣ; ವ್ಯಕ್ತಿ ಬಂಧನ

'ಭಾರತ ಸರ್ಕಾರ' ಎಂಬ ಹೆಸರಿನ ನಾಮಫಲಕ ಹೊಂದಿರುವ ಕಾರಿನಲ್ಲಿ ಆತ ಓಡಾಡುತ್ತಿದ್ದ ಎಂದು ಅಧಿಕಾರಿ ಹೇಳಿದರು. ರಸ್ತೆ ನಿಯಮ ಉಲ್ಲಂಘನೆಗಾಗಿ ದಾದರ್‌ನಲ್ಲಿ ಸಂಚಾರಿ ಕಾನ್‌ಸ್ಟೆಬಲ್ ಒಬ್ಬರು ಆ ವ್ಯಕ್ತಿಯನ್ನು ತಡೆದಿದ್ದರು.

ಮುಂಬೈ: ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಮುಂಬೈನ ಕಸ್ಟಮ್ಸ್ ಅತಿಥಿ ಗೃಹದಲ್ಲಿ ಉಳಿದುಕೊಂಡು 'ಭಾರತ ಸರ್ಕಾರ' ಎಂಬ ಹೆಸರಿನ ನಾಮಫಲಕವಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 32 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಚಂದ್ರಮೋಹನ್ ಸಿಂಗ್ ಬಂಧಿತ ಆರೋಪಿ. ಗೃಹ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡು ಕಸ್ಟಮ್ಸ್ ಸೌಲಭ್ಯದಲ್ಲಿ ಉಳಿದುಕೊಂಡಿದ್ದ. 'ಭಾರತ ಸರ್ಕಾರ' ಎಂಬ ಹೆಸರಿನ ನಾಮಫಲಕ ಹೊಂದಿರುವ ಕಾರಿನಲ್ಲಿ ಆತ ಓಡಾಡುತ್ತಿದ್ದ ಎಂದು ಅಧಿಕಾರಿ ಹೇಳಿದರು. ರಸ್ತೆ ನಿಯಮ ಉಲ್ಲಂಘನೆಗಾಗಿ ದಾದರ್‌ನಲ್ಲಿ ಸಂಚಾರಿ ಕಾನ್‌ಸ್ಟೆಬಲ್ ಒಬ್ಬರು ಆ ವ್ಯಕ್ತಿಯನ್ನು ತಡೆದಿದ್ದರು, ಆದರೆ ತಾನು ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಎಂದು ಹೇಳಿಕೊಂಡು ಆತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳಿವಿನ ಮೇರೆಗೆ ಪೊಲೀಸರು ಶನಿವಾರ ಮಲಾಡ್ ಪ್ರದೇಶದ ಹೋಟೆಲ್‌ನ ಹೊರಗೆ ಚಾಲಕನೊಂದಿಗೆ ಕಾರಿನಲ್ಲಿ ಸಿಂಗ್‌ನನ್ನು ಪತ್ತೆಹಚ್ಚಿದರು. ಆರಂಭದಲ್ಲಿ ಅವರು ಐಎಎಸ್ ಅಧಿಕಾರಿ ಎಂದು ನಟಿಸಿ ನಕಲಿ ಗುರುತಿನ ಚೀಟಿಯನ್ನು ತೋರಿಸಿದ್ದ, ಆದರೆ ತನಿಖೆಯ ಸಮಯದಲ್ಲಿ, ದಾಖಲೆಗಳು ನಕಲಿ ಎಂದು ಅವರು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ಹೇಳಿದರು.

ಆತನ ಬಳಿ ಮತ್ತೊಂದು ದಾಖಲೆಯೂ ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಆ ವ್ಯಕ್ತಿ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದಾನೆಂದು ಹೇಳಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಶನಿವಾರ ಬಂಧಿಸಿ ಸಂಬಂಧಿತ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಈತ ಐಎಎಸ್ ಅಧಿಕಾರಿ ಎಂದು ನಟಿಸುವುದರ ಹಿಂದಿನ ಉದ್ದೇಶವೇನೆಂದು ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT