ಆತ್ಮಹತ್ಯೆಗೆ ಶರಣಾದ ನವವಿವಾಹಿತೆ online desk
ದೇಶ

ಐಷಾರಾಮಿ ಕಾರು, ಚಿನ್ನ ನೀಡಿದ ಬಳಿಕವೂ ಇನ್ನಷ್ಟು ವರದಕ್ಷಿಣೆಗೆ ಪೀಡನೆ; ನವವಿವಾಹಿತೆ ಆತ್ಮಹತ್ಯೆ

ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮಾರ್ಗಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ.

ತಿರುಪ್ಪೂರ್: ವರದಕ್ಷಿಣೆ ಪಿಡುಗು ಇನ್ನೂ ಜೀವಂತವಾಗಿದ್ದು, ತಮಿಳುನಾಡಿ ತಿರುಪ್ಪೂರ್ ನಲ್ಲಿ ಓರ್ವ ಯುವತಿ ಪತಿಯ ಮನೆಯಲ್ಲಿ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಏಪ್ರಿಲ್ ನಲ್ಲಿ ಕವಿನ್ ಕುಮಾರ್ (28) ಎಂಬಾತನೊಂದಿಗೆ ವಿವಾಹವಾಗಿದ್ದ ರಿಧನ್ಯಾ (27) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದಾರೆ.

ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮಾರ್ಗಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಒಂದೇ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಮಹಿಳೆ ಗಾರ್ಮೆಂಟ್ಸ್ ಕಂಪನಿಯನ್ನು ನಡೆಸುತ್ತಿರುವ ಅಣ್ಣಾದೊರೈ ಅವರ ಮಗಳು ಎಂದು ತಿಳಿದುಬಂದಿದೆ.

ರಿಧನ್ಯಾ ಸಾಯುವ ಮುನ್ನ ತನ್ನ ತಂದೆಗೆ ವಾಟ್ಸಾಪ್‌ನಲ್ಲಿ ವಾಯ್ಸ್ ಮೆಸೇಜ್‌ಗಳನ್ನು ಕಳುಹಿಸಿದ್ದಾರೆ. ಮೆಸೇಜ್‌ನಲ್ಲಿ ನನ್ನ ಈ ನಿರ್ಧಾರಕ್ಕಾಗಿ ಕ್ಷಮಿಸಿ, ಪ್ರತಿದಿನ ನನ್ನ ಪತಿ, ಅತ್ತೆ ಹಾಗೂ ಮಾವ ನೀಡುತ್ತಿರುವ ಕಿರುಕುಳ ತಾಳಲಾಗದೇ ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. 70 ಲಕ್ಷ ರೂ. ಮೌಲ್ಯದ ಕಾರು, 800 ಗ್ರಾಂ ಚಿನ್ನ ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT