ಬಿಎಸ್ ಎಫ್ ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರಾ: ಅಂತಾರಾಷ್ಟ್ರೀಯ ಗಡಿಯಲ್ಲಿ ದಾಳಿ; ಗುಂಡಿಕ್ಕಿ ಬಾಂಗ್ಲಾದೇಶಿ ಸ್ಮಗ್ಲರ್ ಹತ್ಯೆಗೈದ BSF!

ದಾಳಿ ವೇಳೆ BSF ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಅಗರ್ತಲಾ:ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯಲ್ಲಿ ಬಾಂಗ್ಲಾದೇಶಿ ಸ್ಮಗ್ಲರ್ ನನ್ನು ಗಡಿ ಭದ್ರತಾ ಪಡೆ (BSF) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿವೆ. ಅಂತಾರಾಷ್ಟ್ರೀಯ ಗಡಿಯ ಎರಡೂ ಕಡೆಯಿಂದ ಕಳ್ಳಸಾಗಾಣಿಕೆದಾರರ ಗುಂಪು ದಾಳಿ ಮಾಡಿದ ನಂತರ ಬಿಎಸ್‌ಎಫ್ ಗುಂಡಿಕ್ಕಿ ಕೊಂದಿದೆ ಎಂದು ಪಡೆ ಶನಿವಾರ ತಿಳಿಸಿದೆ.

ದಾಳಿ ವೇಳೆ BSF ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. 20 ರಿಂದ 25 ಬಾಂಗ್ಲಾದೇಶಿ ದುಷ್ಕರ್ಮಿಗಳ ಗುಂಪು ಕಲಾಂಚೌರಾ ಪೊಲೀಸ್ ಠಾಣೆ ವ್ಯಾಪ್ತಿಯ ಪುತಿಯಾದಲ್ಲಿ ಭಾರತೀಯ ಪ್ರದೇಶವನ್ನು ಪ್ರವೇಶಿಸಿದ್ದು, ಶುಕ್ರವಾರ ಸಂಜೆ ತಡರಾತ್ರಿ ಹಲವಾರು ಭಾರತೀಯ ಸಹಚರರನ್ನು ಭೇಟಿ ಮಾಡಿದೆ.

ಗಡಿ ಭದ್ರತಾ ಪಡೆ ಅವರಿಗೆ ಪ್ರತಿರೋಧ ತೋರುತ್ತಿದ್ದಂತೆಯೇ ಅವರ ಮೇಲೆ ಕಳ್ಳಸಾಗಣೆದಾರರು ದಾಳಿ ಮಾಡಿದ್ದಾರೆ. ಅವರಲ್ಲಿ ಒಬ್ಬರು ಗಾಯಗೊಂಡಿರುವುದಾಗಿ BSF ತಿಳಿಸಿದೆ.

ಕಳ್ಳಸಾಗಣೆದಾರರು ಬಿಎಸ್‌ಎಫ್ ಸಿಬ್ಬಂದಿಯ ಮೇಲೆ ಮತ್ತೊಮ್ಮೆ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಯತ್ನಿಸಿದಾಗ, ಸ್ವಯಂ ರಕ್ಷಣೆಗಾಗಿ ಯೋಧರೊಬ್ಬರು ಬಂದೂಕಿನಿಂದ ಒಂದು ಸುತ್ತಿನ ಗುಂಡು ಹಾರಿಸಿದ್ದಾಗ ಓರ್ವ ಕಳ್ಳಸಾಗಣೆದಾರ ಗಾಯಗೊಂಡಿದ್ದು, ಅವರನ್ನು ಬಿಶಾಲ್‌ಗಢ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತನ ಸಾವನ್ನಪ್ಪಿದ್ದಾನೆ.

ಕಳ್ಳಸಾಗಣೆದಾರನ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ದಾಳಿಯಲ್ಲಿ ಗಾಯಗೊಂಡಿರುವ ಜವಾನ್ ಕೂಡ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು BSF ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT