ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು. 
ದೇಶ

ತೆಲಂಗಾಣ ಸುರಂಗ ಕುಸಿತ: ನಾಲ್ವರು ಸಿಲುಕಿರುವ ಸ್ಥಳ ಗುರುತಿಸಲಾಗಿದೆ ಎಂದ ಸಚಿವ

ಸುರಂಗದಲ್ಲಿ ಸಿಲುಕಿಕೊಂಡಿರುವ ಎಂಟು ಕಾರ್ಮಿಕರ ಪೈಕಿ ನಾಲ್ವರು ಇರುವ ಸ್ಥಳವನ್ನು ರಾಡಾರ್ ಮೂಲಕ ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರು ಶನಿವಾರ ತಿಳಿಸಿದ್ದಾರೆ.

ಹೈದರಾಬಾದ್: ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಕುಸಿದು ಎಂಟು ಕಾರ್ಮಿಕರು ಒಳಗಡೆ ಸಿಲುಕಿದ್ದು, ಕಳೆದ ಒಂದು ವಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸುರಂಗದಲ್ಲಿ ಸಿಲುಕಿಕೊಂಡಿರುವ ಎಂಟು ಕಾರ್ಮಿಕರ ಪೈಕಿ ನಾಲ್ವರು ಇರುವ ಸ್ಥಳವನ್ನು ರಾಡಾರ್ ಮೂಲಕ ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರು ಶನಿವಾರ ತಿಳಿಸಿದ್ದಾರೆ.

ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಕೃಷ್ಣ ರಾವ್ ಅವರು, ಕಳೆದ ಎರಡು ದಿನಗಳಲ್ಲಿ ರಕ್ಷಣಾ ಕಾರ್ಯಚಾರಣೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದರು.

"ನನ್ನ ಅಭಿಪ್ರಾಯದಲ್ಲಿ, ನಾಲ್ಕು ಜನರ ಸ್ಥಳವನ್ನು ರಾಡಾರ್ ಮೂಲಕ ಪತ್ತೆಹಚ್ಚಲಾಗಿದೆ. ಭಾನುವಾರ ಸಂಜೆಯೊಳಗೆ ಅವರನ್ನು ರಕ್ಷಿಸಲಾಗುವುದು" ಎಂದು ಸಚಿವರು ಸ್ಥಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಉಳಿದ ನಾಲ್ವರು ಸುರಂಗ ಕೊರೆಯುವ ಯಂತ್ರ(ಟಿಬಿಎಂ) ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಪತ್ತೆಯಾದವರ ಸ್ಥಿತಿಯ ಬಗ್ಗೆ ಕೇಳಿದಾಗ, ಅವರು ಬದುಕುಳಿಯುವ ಸಾಧ್ಯತೆಗಳು ತುಂಬಾ ಕಡಿಮೆ ಎಂದು ತಮ್ಮ ಹಿಂದಿನ ಹೇಳಿಕೆಯನ್ನು ಸಚಿವರು ಪುನರುಚ್ಚರಿಸಿದರು.

ಸುಮಾರು 11 ಬೇರೆ ಬೇರೆ ರಕ್ಷಣಾ ತಂಡಗಳ ಸಿಬ್ಬಂದಿ ಸಮರೋಪಾದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕೆಸರು ಮತ್ತು ಮಣ್ಣಿನಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಕಾರ್ಮಿಕರನ್ನು ಹೊರಗೆ ತರಲು ಟಿಬಿಎಂ ಅನ್ನು ಕತ್ತರಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT