ಹಿಮಪಾತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ 
ದೇಶ

Uttarakhand Avalanche: ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಇನ್ನೂ ಐವರು ನಾಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ ಕಾರ್ಮಿಕರ ಪೈಕಿ 50 ಮಂದಿಯನ್ನು ರಕ್ಷಿಸಲಾಗಿದೆ.

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಗಾಯಗಳಿಂದ ಮೃತಪಟ್ಟಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.

ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ ಕಾರ್ಮಿಕರ ಪೈಕಿ 50 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಿಸಲಾದ ಕೆಲವು ಕಾರ್ಮಿಕರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಪತ್ತೆಯಾದ ಕಾರ್ಮಿಕರ ಪತ್ತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದೇವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸಮಾರೋಪಾದಿಯಲ್ಲಿ ನಡೆಯುತ್ತಿದೆ.ನಿರಂತರವಾಗಿ ಸುರಿಯುತ್ತಿರುವ ಹಿಮಪಾತ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭಾರೀ ಹಿಮಪಾತದಿಂದ ಶುಕ್ರವಾರ ಸಂಜೆಯವರೆಗೂ ಸ್ಥಗಿತಗೊಂಡಿದ್ದ ರಕ್ಷಣಾ ಕಾರ್ಯಾಚರಣೆ ಶನಿವಾರ ಬೆಳಗ್ಗೆಯಿಂದ ಪುನರ್ ಆರಂಭಿಸಲಾಗಿದೆ ಎಂದು ಭಾರತೀಯ ಸೇನೆ PRO ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರಿವಾಸ್ತವ ತಿಳಿಸಿದ್ದಾರೆ.

ಭಾರತೀಯ ಸೇನೆ, ITBP ಮತ್ತು NDRF ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಹಿಮಪಾತದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉತ್ತರಾಖಂಡ ಸರ್ಕಾರ ಸಹಾಯವಾಣಿ ತೆರೆದಿದೆ.

ಶನಿವಾರ ಬೆಳಿಗ್ಗೆ ಉತ್ತಮ ಹವಾಮಾನದೊಂದಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಪ್ರಾರಂಭವಾಗಿವೆ. ಹಿಮಪಾತದಡಿ ಸಿಲುಕಿದ್ದ 14 ಕಾರ್ಮಿಕರನ್ನು ರಕ್ಷಣಾ ತಂಡಗಳು ಯಶಸ್ವಿಯಾಗಿ ರಕ್ಷಿಸಿದ್ದು, ವೈದ್ಯಕೀಯ ನೆರವು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮನ ಸೇನಾ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಚಮೋಲಿಯ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರ ನಗರ ಪಾಲಿಕೆ ಮತ ಎಣಿಕೆ: ಮಹಾಯುತಿಗೆ ಆರಂಭಿಕ ಮುನ್ನಡೆ: ಮುಂಬೈನಲ್ಲಿ ಮಹಾಯುತಿ-ಠಾಕ್ರೆಗಳ ನಡುವೆ ನಿಕಟ ಸ್ಪರ್ಧೆ

ಜ. 22 ರಿಂದ ವಿಧಾನಸಭೆ ಜಂಟಿ ಅಧಿವೇಶನ: ಜಿ ರಾಮ್ ಜಿ ಕಾಯ್ದೆ ಬಗ್ಗೆ ತೀವ್ರ ಚರ್ಚೆ; CM ಬದಲಾವಣೆ ಜಟಾಪಟಿಗೆ ತಾತ್ಕಾಲಿಕ ತಡೆ!

ಎದೆಹಾಲುಣಿಸುತ್ತಿದ್ದಾಗ ಪತ್ನಿಯ ಹೊಡೆದು ಕೊಂದ ಪಾಪಿ ಪತಿ, ಉಸಿರುಗಟ್ಟಿ 6 ತಿಂಗಳ ಮಗು ಕೂಡ ಸಾವು!

ಇರಾನ್ ಸಂಘರ್ಷ: ಭಾರತೀಯರ ಕರೆತರಲು 'ಕೇಂದ್ರ' ಸಜ್ಜು, ಇಂದೇ ಮೊದಲ ವಿಮಾನದ ಹಾರಾಟ!

ಕುರ್ಚಿ ಹಗ್ಗ ಜಗ್ಗಾಟ: ದೆಹಲಿಗೆ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಜೊತೆ ಮಹತ್ವದ ಭೇಟಿ!

SCROLL FOR NEXT