ಇಡ್ಲಿ 
ದೇಶ

ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳ ಬಳಕೆ: ವರದಿ ಕೇಳಿದ FSSAI, ತನಿಖೆಗೆ ಸೂಚನೆ

'ಪ್ಲಾಸ್ಟಿಕ್‌ನಿಂದ ಹಾನಿಕಾರಕ ರಾಸಾಯನಿಕಗಳು ಆಹಾರಕ್ಕೆ ಸೇರುತ್ತವೆ. ಹೀಗಾಗಿ, ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದು ಆಹಾರದ ಸುರಕ್ಷತೆಯ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದೆ.

ನವದೆಹಲಿ: ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವರದಿಗಳ ಬಗ್ಗೆ ತನಿಖೆ ನಡೆಸುವಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಕರ್ನಾಟಕ ಆಹಾರ ಸುರಕ್ಷತೆ ಇಲಾಖೆಗೆ ನಿರ್ದೇಶಿಸಿದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಕೆಲವು ರೆಸ್ಟೋರೆಂಟ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವ ಕುರಿತಾದ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಎಫ್ಎಸ್ಎಸ್ಎಐ, ಆದಷ್ಟು ಬೇಗ ವರದಿ ಸಲ್ಲಿಸಲು ಮತ್ತು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವ ಹೋಟೆಲ್‌ಗಳ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಸೂಚಿಸಿದೆ.

'ಪ್ಲಾಸ್ಟಿಕ್‌ನಿಂದ ಹಾನಿಕಾರಕ ರಾಸಾಯನಿಕಗಳು ಆಹಾರಕ್ಕೆ ಸೇರುತ್ತವೆ. ಹೀಗಾಗಿ, ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದು ಆಹಾರದ ಸುರಕ್ಷತೆಯ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದೆ.

'ಆಹಾರ ತಯಾರಿಕೆಯಲ್ಲಿ ಕಡಿಮೆ ಗುಣಮಟ್ಟದ ಅಥವಾ ಫುಡ್ ಗ್ರೇಡ್ ಅಲ್ಲದ ಪ್ಲಾಸ್ಟಿಕ್ ಅನ್ನು ಹೆಚ್ಚಿನ ಶಾಖಕ್ಕೆ ಒಡ್ಡಿದಾಗ ಬಿಸ್ಫೆನಾಲ್ ಎ (BPA) ಮತ್ತು ಥಾಲೇಟ್ ಒಳಗೊಂಡಂತೆ ಇತರ ವಿಷಕಾರಿ ರಾಸಾಯನಿಕಗಳು ಬಿಡುಗಡೆಯಾಗುವ ಸಾಧ್ಯತೆ ಇರುತ್ತದೆ. ಇವು ಆಹಾರಕ್ಕೆ ಸೇರಿದಾಗ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ' ಎಂದು ಎಫ್‌ಎಸ್‌ಎಸ್‌ಎಐ ಸಿಇಒ ಜಿ ಕಮಲಾ ವರ್ಧನ್ ರಾವ್ ಹೇಳಿದ್ದಾರೆ.

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಪ್ಲಾಸ್ಟಿಕ್ ಹಾಳೆ ಬಳಸಿ ತಯಾರಿಸಿದ ಇಡ್ಲಿ ಅಸುರಕ್ಷಿತ ಎನ್ನುವುದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟಿದ್ದು, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಇಲಾಖೆ ನಿಷೇಧಿಸಿದೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ, 52 ಕಡೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಿ ಇಡ್ಲಿ ತಯಾರಿಸುತ್ತಿರುವುದು ಕಂಡುಬಂದಿದೆ. ಈ ಇಡ್ಲಿಗಳಲ್ಲಿ ಪ್ಲಾಸ್ಟಿಕ್‌ನಲ್ಲಿರುವ ಹಾನಿಕಾರಕ ಅಂಶಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐ ಇದನ್ನು ಗಂಭೀರವಾಗಿ ಪರಿಗಣಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT