ಸಾಂದರ್ಭಿಕ ಚಿತ್ರ 
ದೇಶ

ಕಾಸರಗೋಡು: WhatsApp ಮೂಲಕ ತ್ರಿವಳಿ ತಲಾಖ್, ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಲ್ಲೂರವಿಯ 21 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಅಬ್ದುಲ್ ರಜಾಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾಸರಗೋಡು: ವಾಟ್ಸಾಪ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ಘೋಷಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾಸರಗೋಡು ಸಮೀಪದ ನೆಲ್ಲಿಕಟ್ಟೆಯ ಅಬ್ದುಲ್ ರಜಾಕ್ ಎಂಬಾತನ ವಿರುದ್ಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಲ್ಲೂರವಿಯ 21 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಅಬ್ದುಲ್ ರಜಾಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಕೆ ಫೆಬ್ರವರಿ 21 ರಂದು ವಾಟ್ಸಾಪ್ ವಾಯ್ಸ್ ಸಂದೇಶದ ಮೂಲಕ ಪತಿ ವಿಚ್ಛೇದನ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಗಲ್ಫ್ ನಲ್ಲಿ ಕೆಲಸ ಮಾಡುತ್ತಿರುವ ರಜಾಕ್ ಯುನೈಟೆಡ್ ಅರಬ್ ಎಮರೈಟ್ಸ್ ನಿಂದ ಮಹಿಳೆಯ ತಂದೆಯ ವಾಟ್ಸಾಪ್ ಸಂಖ್ಯೆಗೆ ತಲಾಖ್ ಸಂದೇಶ ಕಳುಹಿಸಿದ್ದಾರೆ. ತನ್ನ ಪತಿಯ ಕುಟುಂಬ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದೆ ಎಂದು ಮಹಿಳೆ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. ಅಬ್ದುಲ್ ರಜಾಕ್ ರೂ.12 ಲಕ್ಷ ವಂಚಿಸಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.

ಮಹಿಳೆಯ ಕುಟುಂಬದ ದೂರಿನ ಮೇರೆಗೆ ಪೊಲೀಸರು ಭಾನುವಾರ ಅಬ್ದುಲ್ ರಜಾಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351 (4) ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಹಾಗೂ ಮುಸ್ಲಿಂ ಮಹಿಳೆಯರ ( ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ.20 ರಿಂದ 108 ಸೇವೆ ಬಂದ್: ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್; 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್: ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 7.5 ರಷ್ಟು ಒಳಮೀಸಲಾತಿ, ಕರಡು ನಿಯಮ ಪ್ರಕಟ!

ಅಧಿಕಾರ ಬರುತ್ತದೆ, ಹೋಗುತ್ತದೆ ನಿಜ, ಕನಿಷ್ಠ ಸೌಜನ್ಯವೂ ಇಲ್ಲವೇ: ಬೈರತಿ ಸುರೇಶ್ ನಡವಳಿಕೆಗೆ ಮಹಾದೇವಪ್ಪ ಅಸಮಾಧಾನ

KPSC Scam: ನಿನಗೆ 5 ರೂಪಾಯಿ ರೇಷನ್ ಕೂಡ ಸಿಗದ ಹಾಗೆ ಮಾಡುತ್ತೇವೆ; ಅಕ್ರಮ ವಿರುದ್ಧ ದೂರು ದಾಖಲಿಸಿದ್ದವರಿಗೆ ಬೆದರಿಕೆ ಕರೆ

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು