ಎಸ್ ಡಿಆರ್ ಎಫ್ ರಕ್ಷಣಾ ತಂಡ 
ದೇಶ

ಉತ್ತರಾಖಂಡ ಹಿಮಪಾತ: ಇನ್ನೂ ಪತ್ತೆಯಾಗದ ನಾಲ್ವರ ರಕ್ಷಣೆಗೆ ತೀವ್ರ ಕಾರ್ಯಾಚರಣೆ, GPR ವ್ಯವಸ್ಥೆಯ ನೆರವು!

ಭಾರೀ ಹಿಮಪಾತ ಸಂಭವಿಸಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ನಾಪತ್ತೆಯಾಗಿರುವ ನಾಲ್ವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಡೆಹ್ರಾಡೂನ್: ಭಾರೀ ಹಿಮಪಾತ ಸಂಭವಿಸಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ನಾಪತ್ತೆಯಾಗಿರುವ ನಾಲ್ವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಉತ್ತಮ, ಸ್ಪಷ್ಟ ಹವಾಮಾನದಿಂದಾಗಿ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಲಾಗಿದ್ದು, ದೆಹಲಿಯಿಂದ ನೆಲಕ್ಕೆ ನುಗ್ಗುವ ರಾಡಾರ್ (GPR) ವ್ಯವಸ್ಥೆಯು ಶೀಘ್ರದಲ್ಲಿಯೇ ಬರುವ ನಿರೀಕ್ಷೆಯಿದೆ.

ಭಾನುವಾರ ಸ್ನಿಫರ್ ಡಾಗ್‌ಗಳು ಮತ್ತು ಹೆಲಿಕಾಪ್ಟರ್‌ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಪುನರ್ ಆರಂಭವಾಯಿತು. ಜಿಪಿಆರ್ ವ್ಯವಸ್ಥೆಯನ್ನು ಹಿಮಪಾತ ಸಂಭವಿಸಿರುವ ಸ್ಥಳಕ್ಕೆ ಕೊಂಡೊಯ್ಯಲು ಡೆಹ್ರಾಡೂನ್ ನಲ್ಲಿ Mi-17 ಹೆಲಿಕಾಪ್ಟರ್ ಕಾಯುತ್ತಿದೆ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ತಿಳಿಸಿದ್ದಾರೆ.

ಶುಕ್ರವಾರ ಮಾನಾ ಮತ್ತು ಬದರಿನಾಥ್ ನಡುವಿನ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) ಶಿಬಿರ ಬಳಿ ಉಂಟಾಗಿರುವ ಹಿಮಪಾತದಲ್ಲಿ ಎಂಟು ಕಂಟೈನರ್‌ಗಳು ಮತ್ತು ಶೆಡ್‌ನಲ್ಲಿ 55 ಕಾರ್ಮಿಕರು ಸಿಲುಕಿದ್ದರು. ಈ ಪೈಕಿ ಐವತ್ತು ಕಾರ್ಮಿಕರನ್ನು ಹಿಮದಿಂದ ಹೊರತೆಗೆಯಲಾಗಿದ್ದು, ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಪತ್ತೆಯಾಗದ ಕಾರ್ಮಿಕರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜೋಶಿಮಠ ಸೇನಾ ಆಸ್ಪತ್ರೆ ಬಳಿ ಬ್ರಿಗೇಡ್ ಜಿಎಸ್ ಒ ಲೆಪ್ಟಿನೆಂಟ್ ಕರ್ನಲ್ ದೇವೇಂದ್ರ ತಿಳಿಸಿದರು.

ಇನ್ನೂ ಪತ್ತೆಯಾಗದ ಕಾರ್ಮಿಕರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT