ಐಐಟಿ ಬಾಬಾ 
ದೇಶ

IIT Baba: ಗಾಂಜಾ ಮಹಾ 'ಪ್ರಸಾದ'... 'ಐಐಟಿ ಬಾಬಾ' ಅಭಯ್ ಸಿಂಗ್; ಬಂಧನ, ಬಿಡುಗಡೆ!

ಐಐಟಿ ಬಾಬಾ ಎಂದೇ ಜನಪ್ರಿಯರಾಗಿರುವ ಅಭಯ್ ಸಿಂಗ್ ಅವರನ್ನು ರಾಜಸ್ಥಾನದ ಜೈಪುರದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿವೆ. ಡ್ರಗ್ಸ್ ಹೊಂದಿದ್ದಕ್ಕಾಗಿ ಐಐಟಿ ಬಾಬಾ ಅವರನ್ನು ಬಂಧಿಸಲಾಗಿತ್ತು.

ಆಜೈಪುರ: ಐಐಟಿ ಬಾಬಾ ಎಂದೇ ಜನಪ್ರಿಯರಾಗಿರುವ ಅಭಯ್ ಸಿಂಗ್ ಅವರನ್ನು ರಾಜಸ್ಥಾನದ ಜೈಪುರದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿವೆ. ಡ್ರಗ್ಸ್ ಹೊಂದಿದ್ದಕ್ಕಾಗಿ ಐಐಟಿ ಬಾಬಾ ಅವರನ್ನು ಬಂಧನ ಮಾಡಲಾಗಿತ್ತು. ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯಡಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವಿಚಾರಣೆ ಬಳಿಕ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಜೈಪುರ ಪೊಲೀಸರು ಐಐಟಿ ಪದವೀಧರ ಬಾಬಾ ಅಭಯ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ಹೀಗಾಗಿ ಅಭಯ್ ಸಿಂಗ್ ಇದ್ದ ಸ್ಥಳವನ್ನು ಪತ್ತೆಹಚ್ಚಿದ ಶಿಪ್ರಪಥ ಪೊಲೀಸ್ ಠಾಣೆಯ ಸಿಐ ರಾಜೇಂದ್ರ ಗೋದಾರ ಅವರು ತಮ್ಮ ತಂಡದೊಂದಿಗೆ ಹೋಟೆಲ್‌ಗೆ ತಲುಪಿ ಬಾಬಾ ಅವರನ್ನು ವಶಕ್ಕೆ ಪಡೆದಿದ್ದರು.

ಹೋಟೆಲ್ ಕೊಠಡಿಯನ್ನು ಶೋಧಿಸುವಾಗ, ಪೊಲೀಸರಿಗೆ ಗಾಂಜಾ ಸೇರಿದಂತೆ ಕೆಲವು ಮಾದಕ ವಸ್ತುಗಳು ಸಿಕ್ಕಿದ್ದವು. ಇದಾದ ನಂತರ ಪೊಲೀಸರು ಬಾಬಾ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಇದೇ ವೇಳೆ ಬಾಬಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಕ್ಕೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಅವರೊಂದಿಗೆ ಪತ್ತೆಯಾದ ಡ್ರಗ್ಸ್ ಮೂಲದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬಾಬಾ ವಿರುದ್ಧ ಈಗಾಗಲೇ ಯಾವುದಾದರೂ ಪ್ರಕರಣ ದಾಖಲಾಗಿದೆಯೇ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂದರ್ಭದಲ್ಲಿ, ಅಭಯ್ ಸಿಂಗ್ ಅಲಿಯಾಸ್ ಐಐಟಿಯನ್ ಬಾಬಾ 'ಸ್ವಲ್ಪ ಪ್ರಸಾದ (ಗಾಂಜಾ) ಸಿಕ್ಕಿದೆ' ಎಂದು ಹೇಳುತ್ತಾರೆ. ಈ ಪ್ರಸಾದದ ಮೇಲೆ ನೀವು ಪ್ರಕರಣ ದಾಖಲಿಸಿದರೆ, ಕುಂಭಮೇಳದಲ್ಲಿ ಇಷ್ಟೊಂದು ಜನರು ಅದನ್ನು ಸೇವಿಸುತ್ತಾರೆ, ಅವರೆಲ್ಲರನ್ನೂ ಬಂಧಿಸಿ ಎಂದು ನಾನು ಪೊಲೀಸರನ್ನು ಕೇಳಿದೆ ಎಂದು ಐಐಟಿ ಬಾಬಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT