ಗಿರ್ ನಲ್ಲಿ ಪ್ರಧಾನಿ ಮೋದಿ 
ದೇಶ

ಏಷ್ಯಾಟಿಕ್ ಸಿಂಹಗಳ ಗಣತಿ ಘೋಷಿಸಿದ ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗಾಗಿ ಶ್ರೇಷ್ಠತೆಯ ಕೇಂದ್ರ, SACON ಅನ್ನು ಸ್ಥಾಪಿಸುವುದಾಗಿಯೂ ಪ್ರಧಾನಿ ಘೋಷಿಸಿದರು.

ಜುನಾಗಢ: ಈ ವರ್ಷದ ಮೇ ತಿಂಗಳಲ್ಲಿ ಏಷ್ಯಾಟಿಕ್ ಸಿಂಹಗಳ ಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಘೋಷಿಸಿದ್ದಾರೆ.

ಇಂದು ವಿಶ್ವ ವನ್ಯಜೀವಿ ದಿನದ ಅಂಗವಾಗಿ ಗುಜರಾತ್‌ನ ಜುನಾಗಢ ಜಿಲ್ಲೆಯ ಸಸಾನ್‌ನಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಏಳನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವರ್ಷದ ಮೇ ತಿಂಗಳಲ್ಲಿ 16ನೇ ಏಷ್ಯಾಟಿಕ್ ಸಿಂಹಗಳ ಗಣತಿ ನಡೆಸುವುದಾಗಿ ತಿಳಿಸಿದರು.

ಇದೇ ವೇಳೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗಾಗಿ ಶ್ರೇಷ್ಠತೆಯ ಕೇಂದ್ರ, SACON ಅನ್ನು ಸ್ಥಾಪಿಸುವುದಾಗಿಯೂ ಪ್ರಧಾನಿ ಘೋಷಿಸಿದರು ಮತ್ತು ನದಿ ಡಾಲ್ಫಿನ್‌ಗಳ ಕುರಿತು ಪುಸ್ತಕವನ್ನು ಬಿಡುಗಡೆ ಮಾಡಿದರು.

ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಏಳನೇ ಸಭೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಮತ್ತು ಇತರ ಸದಸ್ಯರು ಭಾಗವಹಿಸಿದ್ದರು.

ಇದಕ್ಕು ಮುನ್ನ ಪ್ರಧಾನಿ ಮೋದಿ ಅವರು ಗಿರ್ ಅಭಯಾರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು. ಬಳಿಕ ಸಫಾರಿಯ ಸಮಯದಲ್ಲಿ ತಾವು ನೋಡಿದ ಸಿಂಹಗಳ ಚಿತ್ರಗಳನ್ನು ಪ್ರಧಾನಿಯವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT