ಸುಪ್ರೀಂಕೋರ್ಟ್ 
ದೇಶ

ನ್ಯಾಯಾಂಗ ನೇಮಕಾತಿಗಳಲ್ಲಿ ದೃಷ್ಟಿ ಹೀನ ಅಭ್ಯರ್ಥಿಗಳನ್ನು ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್

ಸ್ವಯಂ ಪ್ರೇರಿತ ಪ್ರಕರಣ ಸೇರಿದಂತೆ ಆರು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು.

ನವದೆಹಲಿ: ಯಾವುದೇ ವ್ಯಕ್ತಿಗೆ ದೈಹಿಕ ಅಂಗವೈಕಲ್ಯ ಇದ್ದ ಮಾತ್ರಕ್ಕೆ ನ್ಯಾಯಾಂಗ ಸೇವೆಯಲ್ಲಿ ನೇಮಕಾತಿಯನ್ನು ನಿರಾಕರಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕೆಲವು ರಾಜ್ಯಗಳ ನ್ಯಾಯಾಂಗ ಸೇವೆಗಳಲ್ಲಿ ಅಂತಹ ಅಭ್ಯರ್ಥಿಗಳಿಗೆ ಮೀಸಲಾತಿ ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶದ ಅಂಧ ಅಭ್ಯರ್ಥಿಯ ತಾಯಿಯೊಬ್ಬರ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಆಲಿಸಿದ ನಂತರ ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ತೀರ್ಪು ನೀಡಿದೆ. ಸ್ವಯಂ ಪ್ರೇರಿತ ಪ್ರಕರಣ ಸೇರಿದಂತೆ ಆರು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು.

ಮಧ್ಯಪ್ರದೇಶದ ಅಂಧ ಅಭ್ಯರ್ಥಿಯ ತಾಯಿ ಕಳೆದ ವರ್ಷ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದು, ರಾಜ್ಯ ನ್ಯಾಯಾಂಗ ಸೇವೆಗಳಲ್ಲಿ ದೃಷ್ಟಿಹೀನ ಅಭ್ಯರ್ಥಿಗಳನ್ನು ನೇಮಿಸುವುದನ್ನು ತಡೆಯುವ ಮಧ್ಯಪ್ರದೇಶ ನ್ಯಾಯಾಂಗ ಸೇವೆಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳಲ್ಲಿನ ನಿಬಂಧನೆಯ ಬಗ್ಗೆ ಪ್ರಶ್ನಿಸಿದ್ದರು.

ಪತ್ರ ಸ್ವೀಕರಿಸಿದ ನಂತರ, ಸುಪ್ರೀಂ ಕೋರ್ಟ್ ಈ ಪತ್ರವನ್ನು ಸ್ವಯಂ ಪ್ರೇರಿತ ಅರ್ಜಿಯಾಗಿ ಪರಿವರ್ತಿಸಿತು ಮತ್ತು ಅದನ್ನು ಸ್ವಂತವಾಗಿ ವಿಚಾರಣೆ ಮಾಡಲು ನಿರ್ಧರಿಸಿತು.

ತೀರ್ಪು ಪ್ರಕಟಿಸಿದ ನ್ಯಾ. ಮಹದೇವನ್, ದೇಹ ದೌರ್ಬಲ್ಯದ ಕಾರಣಕ್ಕೆ ನ್ಯಾಯಾಂಗ ಸೇವೆಯ ನೇಮಕಾತಿಗಳಲ್ಲಿ ಯಾವುದೇ ತಾರತಮ್ಯ ಮಾಡಕೂಡದು. ಅಂತವರನ್ನೂ ಒಳಗೊಂಡ ಚೌಕಟ್ಟನ್ನು ಖಚಿತಪಡಿಸಿಕೊಳ್ಳಲು ರಾಜ್ಯವು ‌ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಯಾವುದೇ ವ್ಯಕ್ತಿಯನ್ನು ಅಂಗವೈಕಲ್ಯ ಕಾರಣದಿಂದ ದೂರವಿಡುವಂತಿಲ್ಲ ಎಂದು ಹೇಳಿದ್ದಾರೆ.

ಯಾವುದೇ ವ್ಯಕ್ತಿಗೆ ನ್ಯಾಯಾಂಗ ಸೇವೆಯಲ್ಲಿ ನೇಮಕಾತಿಗಾಗಿ ಅವರ ಅಂಗವೈಕಲ್ಯದ ಕಾರಣದಿಂದ ಪರಿಗಣನೆಯನ್ನು ನಿರಾಕರಿಸಲಾಗುವುದಿಲ್ಲ" ಎಂದು ನ್ಯಾಯಮೂರ್ತಿ ಮಹಾದೇವನ್ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT