ಕುಸ್ತಿಪಟು ಸುಶೀಲ್ ಕುಮಾರ್ 
ದೇಶ

ಛತ್ರಸಾಲ್ ಕ್ರೀಡಾಂಗಣದಲ್ಲಿ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು

ಕಳೆದ ಮೂರುವರೆ ವರ್ಷಗಳಿಂದ ಜೈಲಿನಲ್ಲಿರುವ ಸುಶೀಲ್ ಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು, ಆರೋಪಿ ಕುಸ್ತಿಪಟುಗೆ ಜಾಮೀನು ಮಂಜೂರು ಮಾಡಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ತಮ್ಮ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧಂಕರ್ ಅವರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

ಕಳೆದ ಮೂರುವರೆ ವರ್ಷಗಳಿಂದ ಜೈಲಿನಲ್ಲಿರುವ ಸುಶೀಲ್ ಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು, ಆರೋಪಿ ಕುಸ್ತಿಪಟುಗೆ ಜಾಮೀನು ಮಂಜೂರು ಮಾಡಿದ್ದಾರೆ. ಅಲ್ಲದೆ ಇಬ್ಬರು ಶ್ಯೂರಿಟಿಗಳೊಂದಿಗೆ 50,000 ರೂ.ಗಳ ವೈಯಕ್ತಿಕ ಬಾಂಡ್ ಸಲ್ಲಿಸುವಂತೆ ಕುಮಾರ್ ಗೆ ಸೂಚಿಸಿದ್ದಾರೆ.

ಕುಮಾರ್ ಮತ್ತು ಇತರರು ಮೇ 2021 ರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಧಂಕರ್ ಮತ್ತು ಆತನ ಸ್ನೇಹಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಕುಸ್ತಿಪಟು ಸುಶೀಲ್ ಕುಮಾರ್‌ಸುಶೀಲ್ ಕುಮಾರ್ ಅವರು ಕಳೆದ ಮೂರುವರೆ ವರ್ಷಗಳಿಂದ ಜೈಲಿನಲ್ಲಿದ್ದಾರೆ ಮತ್ತು ಪ್ರಾಸಿಕ್ಯೂಷನ್ 200 ಸಾಕ್ಷಿಗಳನ್ನು ಉಲ್ಲೇಖಿಸಿದೆ. ಆದರೆ ಇಲ್ಲಿಯವರೆಗೆ ಕೇವಲ 31 ಸಾಕ್ಷಿಗಳನ್ನು ಮಾತ್ರ ವಿಚಾರಣೆ ನಡೆಸಲಾಗಿದೆ ಎಂದು ಆರೋಪಿ ಪರ ವಕೀಲ ಆರ್ ಕೆ ಮಲಿಕ್ ಅವರು ಹೇಳಿದ್ದಾರೆ.

ಸಾಕ್ಷಿಗಳ ವಿಚಾರಣೆ ಮುಗಿಯಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಮತ್ತು ವಿಳಂಬದ ಕಾರಣ ಸುಶೀಲ್ ಕುಮಾರ್‌ಗೆ ಜಾಮೀನು ನೀಡಬೇಕು ಎಂದು ಮಲಿಕ್ ವಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT