ರೈತರ ಮನೆ ಮೇಲೆ ದಾಳಿ, ಸಿಸಿಟಿವಿ ದೃಶ್ಯ 
ದೇಶ

'ಚಂಡೀಗಢ ಚಲೋ'ಗೂ ಮುನ್ನ ರೈತ ಸಂಘದ ಹಲವು ನಾಯಕರನ್ನು ಬಂಧಿಸಿದ ಪಂಜಾಬ್ ಪೊಲೀಸರು

ಪಂಜಾಬ್ ಪೊಲೀಸರು 'ಮಧ್ಯರಾತ್ರಿ' ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಹಲವಾರು ರೈತ ಸಂಘಗಳ ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಚಂಡೀಗಢ: ಸಂಯುಕ್ತ ಕಿಸಾನ್ ಮೋರ್ಚಾ(SKM) ಮಾರ್ಚ್ 5 ರಂದು 'ಚಂಡೀಗಢ ಚಲೋ'ಗೆ ಕರೆ ನೀಡಿದ್ದು, ನಾಳೆ ಪ್ರತಿಭಟನಾ ಮೆರವಣಿಗೆಗೆ ಸಿದ್ಧವಾಗಿದ್ದ ಹಲವು ರೈತರ ಮುಖಂಡರನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮಾರ್ಚ್ 3 ರಂದು ರೈತ ನಾಯಕರು ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಡುವಿನ ಮಾತುಕತೆ ವಿಫಲವಾದ ನಂತರ ರೈತರು 'ಚಂಡೀಗಢ ಚಲೋ'ಗೆ ಕರೆ ನೀಡಿದ್ದಾರೆ.

ಪಂಜಾಬ್ ಪೊಲೀಸರು 'ಮಧ್ಯರಾತ್ರಿ' ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಹಲವಾರು ರೈತ ಸಂಘಗಳ ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಏತನ್ಮಧ್ಯೆ, ರೈತ ನಾಯಕರನ್ನು ಬಂಧಿಸಿದ್ದಕ್ಕಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷದ ನಾಯಕರು, ಇದು AAP ಸರ್ಕಾರದ ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಆದಾಗ್ಯೂ, ರೈತ ಸಂಘದ ನಾಯಕರು ಪ್ರತಿಭಟನೆಗೂ ಮುಂಚಿತವಾಗಿ ರಾಜ್ಯ ಸರ್ಕಾರದಿಂದ ಇಂತಹ ಕ್ರಮ ನಿರೀಕ್ಷಿಸಿತ ಎಂದಿದ್ದಾರೆ.

"ಪೊಲೀಸರು ಬಂಧಿಸಲು ಬಂದಾಗ ಬೆಳಗ್ಗೆ ಹೆಚ್ಚಿನ ನಾಯಕರು ಮನೆಯಲ್ಲಿ ಇರಲಿಲ್ಲ. ಅವರಲ್ಲಿ ಕೆಲವರನ್ನು ಬಂಧಿಸಲಾಗಿದ್ದರೂ, ದಾಳಿಯ ಸಮಯದಲ್ಲಿ ಅನೇಕ ರೈತ ನಾಯಕರು ಇರಲಿಲ್ಲ" ಎಂದು ರೈತ ಮುಖಂಡರೊಬ್ಬರು ಹೇಳಿದ್ದಾರೆ.

ಪೊಲೀಸರು ಬಂಧಿಸಿದ ಸಂಯುಕ್ತ ಕಿಸಾನ್ ಮೋರ್ಚಾದ ರೈತ ನಾಯಕರಲ್ಲಿ ಪ್ರೇಮ್ ಸಿಂಗ್ ಭಂಗು, ರುಲ್ದು ಸಿಂಗ್ ಮಾನ್ಸಾ, ಹರಿಂದರ್ ಸಿಂಗ್ ಲಖೋವಾಲ್, ಮಹೇಶ್ ಚಂದರ್ ಶರ್ಮಾ ಮತ್ತು ಪರಮದೀಪ್ ಸಿಂಗ್ ಬೈದ್ವಾನ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

, ಪಂಜಾಬ್ ಪೊಲೀಸರು ಎಸ್‌ಕೆಎಂ ನಾಯಕರ ನಿವಾಸಗಳ ಮೇಲೆ ಇಂದು ಬೆಳಗಿನ ಜಾವ "ದಾಳಿ" ನಡೆಸಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್(ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಹೇಳಿದ್ದಾರೆ.

"ಇಂತಹ ಕ್ರಮಗಳಿಂದ ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ನಾವು ವಿವಿಧ ರೈತರ ಬೇಡಿಕೆಗಳನ್ನು ಬೆಂಬಲಿಸಿ ಹೋರಾಡುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT