ವಂತಾರದಲ್ಲಿ ಮೋದಿ online desk
ದೇಶ

Vantara ಉದ್ಘಾಟನೆ: ಒರಾಂಗುಟನ್ ಸಿಂಹದ ಮರಿಯೊಂದಿಗೆ PM Modi; Anant Ambani ಒಡೆತನದ ಪ್ರಾಣಿಗಳ ರಕ್ಷಣೆ ಪುನರ್ವಸತಿ ಕೇಂದ್ರದ ವಿಶೇಷತೆಗಳ ವಿಡಿಯೋ...

ಬಹ್ರೇನ್‌ನಲ್ಲಿ ಪ್ರಾಣಿ ಸಂಗ್ರಾಹಲಯದಲ್ಲಿ ಪ್ರಾಣಿಗಳನ್ನು ಸಾಕಲು ಸಾಧ್ಯವಾಗದೆ ಕೈಬಿಡಲಾಗಿತ್ತು. 200 ಪ್ರಾಣಿಗಳಿಗೆ ಜಾಮ್ ನಗರದಲ್ಲಿರುವ ವಂತಾರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಜಾಮ್ ನಗರ್: ಮೂರು ದಿನಗಳ ಪ್ರವಾಸಕ್ಕಾಗಿ ಗುಜರಾತ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮಾ.04 ರಂದು ಅನಂತ್ ಅಂಬಾನಿಯವರ ಪ್ರಾಣಿಗಳ ರಕ್ಷಣೆ, ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾದ ವಂತಾರಕ್ಕೆ ಭೇಟಿ ನೀಡಿ ಉದ್ಘಾಟಿಸಿದರು.

ನಂತ್ ಅಂಬಾನಿ ಒಡೆತನದ ವಂತಾರ ಪ್ರಾಣಿ ರಕ್ಷಣಾ ಕೇಂದ್ರವಾಗಿದ್ದು, ಅನಾಥ ಪ್ರಾಣಿಗಳನ್ನು ಪ್ರಾಣಿಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಿಲಯನ್ಸ್ ಫೌಂಡೇಶನ್ ವಂತರಾ ಎಂಬ ಸಮಗ್ರ ಯೋಜನೆಯನ್ನು ಪ್ರಾರಂಭಿಸಿದೆ.

ಬಹ್ರೇನ್‌ನಲ್ಲಿ ಪ್ರಾಣಿ ಸಂಗ್ರಾಹಲಯದಲ್ಲಿ ಪ್ರಾಣಿಗಳನ್ನು ಸಾಕಲು ಸಾಧ್ಯವಾಗದೆ ಕೈಬಿಡಲಾಗಿತ್ತು. 200 ಪ್ರಾಣಿಗಳಿಗೆ ಜಾಮ್ ನಗರದಲ್ಲಿರುವ ವಂತಾರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಪ್ರಧಾನಿ ಈ ಕೇಂದ್ರಕ್ಕೆ ಭೇಟಿ ನೀಡಿ ಸಮಯ ಕಳೆದಿದ್ದಾರೆ. ವಂತಾರದಲ್ಲಿ 2,000 ಕ್ಕೂ ಹೆಚ್ಚು ಪ್ರಭೇದಗಳ ಪ್ರಾಣಿಗಳಿದ್ದು, ರಕ್ಷಿಸಲಾಗಿದೆ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳು 1.5 ಲಕ್ಷ ಪ್ರಾಣಿಗಳಿಗೆ ಆಶ್ರಯ ಕಲ್ಪಿಸಲಾಗಿದೆ.

ಇದು ರಿಲಯನ್ಸ್ ಜಾಮ್‌ನಗರ ಸಂಸ್ಕರಣಾಗಾರ ಸಂಕೀರ್ಣದಲ್ಲಿ 3000 ಎಕರೆಗಳಷ್ಟು ವಿಸ್ತಾರವಾಗಿದ್ದು, ಅತ್ಯಾಧುನಿಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರವಾಗಿದೆ.

ಪ್ರಧಾನಿ ಮೋದಿ ಪುನರ್ವಸತಿ ಕಲ್ಪಿಸಲಾದ ವಿವಿಧ ಜಾತಿಯ ಪ್ರಾಣಿಗಳೊಂದಿಗೆ ನಿಕಟವಾಗಿ ಒಡನಾಡುತ್ತಿರುವ ಮತ್ತು ಸಮಯ ಕಳೆಯುತ್ತಿರುವುದನ್ನು ಕಾಣಬಹುದಾಗಿದೆ.

ಪ್ರಧಾನಿ ಮೋದಿ ಒರಾಂಗುಟನ್‌ಗಳು, ಏಷ್ಯಾಟಿಕ್ ಸಿಂಹದ ಮರಿಗಳು, ಬಿಳಿ ಸಿಂಹದ ಮರಿ ಮತ್ತು ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದವಾಗಿರುವ ಮೋಡದ ಚಿರತೆ ಮರಿ ಸೇರಿದಂತೆ ಇತರ ಪ್ರಾಣಿಗಳೊಂದಿಗೆ ಆಟವಾಡುವುದನ್ನು ಮತ್ತು ಆಹಾರ ನೀಡುವ ವಿಡಿಯೋ ವೈರಲ್ ಆಗತೊಡಗಿದೆ.

ಪ್ರಧಾನಿ ಮೋದಿ ಅವರು ವಂಟಾರಾದ ಕೇಂದ್ರದಲ್ಲಿ ವಿವಿಧ ಸೌಲಭ್ಯಗಳನ್ನು ಅನ್ವೇಷಿಸಿದರು. ಅವರು ವಂಟಾರಾದ ವನ್ಯಜೀವಿ ಆಸ್ಪತ್ರೆಗೆ ಭೇಟಿ ನೀಡಿದರು ಮತ್ತು MRI, CT ಸ್ಕ್ಯಾನ್‌ಗಳು, ICU ಗಳು ಸೇರಿದಂತೆ ಇತರವುಗಳನ್ನು ಹೊಂದಿರುವ ಪಶುವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿದರು ಮತ್ತು ವನ್ಯಜೀವಿ ಅರಿವಳಿಕೆ, ಹೃದ್ರೋಗ, ನೆಫ್ರಾಲಜಿ, ಎಂಡೋಸ್ಕೋಪಿ, ದಂತಚಿಕಿತ್ಸೆ, ಆಂತರಿಕ ಔಷಧ ಇತ್ಯಾದಿಗಳನ್ನು ಒಳಗೊಂಡ ಬಹು ವಿಭಾಗಗಳನ್ನು ಸಹ ವೀಕ್ಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT