ಲಾಜರ್ ಮಸಿಹ್ 
ದೇಶ

ಯುಪಿ STF, ಪಂಜಾಬ್ ಪೊಲೀಸರ ಕಾರ್ಯಾಚರಣೆ: ಮಹಾಕುಂಭ ಟಾರ್ಗೆಟ್ ಮಾಡಿದ್ದ ಉಗ್ರನ ಬಂಧನ!

ಐಎಸ್ ಐ ಉಗ್ರ ಸಂಘಟನೆಯ ಭಾಗವಾಗಿರುವ ಮಸಿಹ್, ಮಹಾಕುಂಭ ಟಾರ್ಗೆಟ್ ಮಾಡಿದ್ದ ಎಂದು ಯುಪಿ ಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಕೌಸಂಬಿ: ಉತ್ತರ ಪ್ರದೇಶ ಎಸ್ ಟಿಎಫ್ ಮತ್ತು ಪಂಜಾಬ್ ಪೊಲೀಸರು ಕೌಸಂಬಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಬ್ಬರ್ ಖಾಲ್ಸಾ ಎಂಬ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯ ಮುಖ್ಯಸ್ಥ ಲಾಜರ್ ಮಸಿಹ್ ಎಂಬಾತನನ್ನು ಬಂಧಿಸಿದ್ದಾರೆ.

ಐಎಸ್ ಐ ಉಗ್ರ ಸಂಘಟನೆಯ ಭಾಗವಾಗಿರುವ ಮಸಿಹ್, ಮಹಾಕುಂಭ ಟಾರ್ಗೆಟ್ ಮಾಡಿದ್ದ ಎಂದು ಯುಪಿ ಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಮಹಾಕುಂಭ ಮೇಳದ ವೇಳೆ ತೀವ್ರವಾದ ಭದ್ರತಾ ತಪಾಸಣೆಯಿಂದ ಬಂಧಿತ ಉಗ್ರ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ವಿಫಲವಾಗಿದ್ದ ಎಂದು ಅವರು ಹೇಳಿದರು. ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ನಡೆಯಿತು.

ಬಂಧಿತ ಉಗ್ರ ಜರ್ಮನಿ ಮೂಲದ ಬಬ್ಬರ್ ಖಾಲ್ಸಾ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯ ಮುಖ್ಯಸ್ಥ ಸ್ವರ್ಣ್ ಸಿಂಗ್ ಅಲಿಯಾಸ ಜೀವನ್ ಫೌಜಿಗಾಗಿ ಕೆಲಸ ಮಾಡುತ್ತಿದ್ದ. ಅಲ್ಲದೇ ಆತ ಪಾಕಿಸ್ತಾನದಿಂದ ಭಾರತಕ್ಕೆ ಶಸ್ತ್ರಾಸ್ತ್ರಗಳು, ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ಎಸ್ ಟಿಎಫ್ ಹಾಗೂ ಪಂಜಾಬ್ ಪೊಲೀಸರ ಸಮನ್ವಯತೆಯಿಂದ 2024ರಿಂದ ತಲೆಮೆರೆಸಿಕೊಂಡಿದ್ದ ಅಮೃತ ಸರದ ನಿವಾಸಿ ಲಾಜರ್ ಮಸಿಹ್ ಬಂಧಿಸಲಾಗಿದೆ. ಮಸಿಹ್ ಈ ಹಿಂದೆ ಪಾಕಿಸ್ತಾನದ ಐಎಸ್‌ಐ ಕಾರ್ಯಕರ್ತರೊಂದಿಗೆ ನೇರ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಬಂಧಿತನಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಗ್ರೆನೇಡ್, 2 ಡಿಟೋನೆಟರ್ 13 ಕಾರ್ಟ್ರಿಡ್ಜ್‌ಗಳು ಮತ್ತು 1 ವಿದೇಶಿ ನಿರ್ಮಿತ ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ಪ್ರದೇಶದ ಎಸ್ ಟಿಎಫ್ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

ಬೆಳಗಾವಿ ಅಧಿವೇಶನ 2025: ಸುವರ್ಣ ಸೌಧದಲ್ಲೂ'ನಾಟಿ ಕೋಳಿ' ಸದ್ದು, ಆರ್ ಅಶೋಕ್ ಗೆ ಸಿಎಂ ಸಿದ್ದು ಸಲಹೆ!

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

SCROLL FOR NEXT