ಲಾಜರ್ ಮಸಿಹ್ 
ದೇಶ

ಯುಪಿ STF, ಪಂಜಾಬ್ ಪೊಲೀಸರ ಕಾರ್ಯಾಚರಣೆ: ಮಹಾಕುಂಭ ಟಾರ್ಗೆಟ್ ಮಾಡಿದ್ದ ಉಗ್ರನ ಬಂಧನ!

ಐಎಸ್ ಐ ಉಗ್ರ ಸಂಘಟನೆಯ ಭಾಗವಾಗಿರುವ ಮಸಿಹ್, ಮಹಾಕುಂಭ ಟಾರ್ಗೆಟ್ ಮಾಡಿದ್ದ ಎಂದು ಯುಪಿ ಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಕೌಸಂಬಿ: ಉತ್ತರ ಪ್ರದೇಶ ಎಸ್ ಟಿಎಫ್ ಮತ್ತು ಪಂಜಾಬ್ ಪೊಲೀಸರು ಕೌಸಂಬಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಬ್ಬರ್ ಖಾಲ್ಸಾ ಎಂಬ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯ ಮುಖ್ಯಸ್ಥ ಲಾಜರ್ ಮಸಿಹ್ ಎಂಬಾತನನ್ನು ಬಂಧಿಸಿದ್ದಾರೆ.

ಐಎಸ್ ಐ ಉಗ್ರ ಸಂಘಟನೆಯ ಭಾಗವಾಗಿರುವ ಮಸಿಹ್, ಮಹಾಕುಂಭ ಟಾರ್ಗೆಟ್ ಮಾಡಿದ್ದ ಎಂದು ಯುಪಿ ಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಮಹಾಕುಂಭ ಮೇಳದ ವೇಳೆ ತೀವ್ರವಾದ ಭದ್ರತಾ ತಪಾಸಣೆಯಿಂದ ಬಂಧಿತ ಉಗ್ರ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ವಿಫಲವಾಗಿದ್ದ ಎಂದು ಅವರು ಹೇಳಿದರು. ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ನಡೆಯಿತು.

ಬಂಧಿತ ಉಗ್ರ ಜರ್ಮನಿ ಮೂಲದ ಬಬ್ಬರ್ ಖಾಲ್ಸಾ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯ ಮುಖ್ಯಸ್ಥ ಸ್ವರ್ಣ್ ಸಿಂಗ್ ಅಲಿಯಾಸ ಜೀವನ್ ಫೌಜಿಗಾಗಿ ಕೆಲಸ ಮಾಡುತ್ತಿದ್ದ. ಅಲ್ಲದೇ ಆತ ಪಾಕಿಸ್ತಾನದಿಂದ ಭಾರತಕ್ಕೆ ಶಸ್ತ್ರಾಸ್ತ್ರಗಳು, ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ಎಸ್ ಟಿಎಫ್ ಹಾಗೂ ಪಂಜಾಬ್ ಪೊಲೀಸರ ಸಮನ್ವಯತೆಯಿಂದ 2024ರಿಂದ ತಲೆಮೆರೆಸಿಕೊಂಡಿದ್ದ ಅಮೃತ ಸರದ ನಿವಾಸಿ ಲಾಜರ್ ಮಸಿಹ್ ಬಂಧಿಸಲಾಗಿದೆ. ಮಸಿಹ್ ಈ ಹಿಂದೆ ಪಾಕಿಸ್ತಾನದ ಐಎಸ್‌ಐ ಕಾರ್ಯಕರ್ತರೊಂದಿಗೆ ನೇರ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಬಂಧಿತನಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಗ್ರೆನೇಡ್, 2 ಡಿಟೋನೆಟರ್ 13 ಕಾರ್ಟ್ರಿಡ್ಜ್‌ಗಳು ಮತ್ತು 1 ವಿದೇಶಿ ನಿರ್ಮಿತ ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ಪ್ರದೇಶದ ಎಸ್ ಟಿಎಫ್ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT