ಹತ್ಯೇಗೀಡಾದ ಪ್ರವೀಣ್  
ದೇಶ

ತೆಲಂಗಾಣ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಗುಂಡಿಕ್ಕಿ ಹತ್ಯೆ

ಜಿ. ಪ್ರವೀಣ್ ಎಂಬುವವರು ವಿಸ್ಕಾನ್ಸಿನ್‌ನ ಮಿಲ್ವಾಕೀಯಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದರು.

ಹೈದರಾಬಾದ್: ತೆಲಂಗಾಣ ರಾಜ್ಯದ 26 ವರ್ಷದ ವಿದ್ಯಾರ್ಥಿಯೊಬ್ಬರು ಅಮೆರಿಕದಲ್ಲಿ ಗುಂಡೇಟಿನಿಂದ ಮೃತಪಟ್ಟಿದ್ದು, ಅವರ ಸಾವಿಗೆ ನಿಖರ ಕಾರಣ ಮತ್ತು ಸಂದರ್ಭ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.

ಜಿ. ಪ್ರವೀಣ್ ಎಂಬುವವರು ವಿಸ್ಕಾನ್ಸಿನ್‌ನ ಮಿಲ್ವಾಕೀಯಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದರು. ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಬೆಳಗ್ಗೆ ಅವರ ಕುಟುಂಬಕ್ಕೆ ಅಮೆರಿಕದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರವೀಣ್ ಅವರ ದೇಹಕ್ಕೆ ಗುಂಡುಗಳು ತಗುಲಿದೆ ಎಂದು ಅವರ ಕೆಲವು ಸ್ನೇಹಿತರು ಹೇಳಿದ್ದಾರೆ ಎಂದು ಅವರ ಸೋದರಸಂಬಂಧಿ ಅರುಣ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಅಂಗಡಿಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಪ್ರವೀಣ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕೆಲವರು ಹೇಳುತ್ತಾರೆ, ಆದರೆ ಸಾವಿಗೆ ನಿಖರ ಕಾರಣವೇನೆಂದು ಕುಟುಂಬ ಸದಸ್ಯರಿಗೆ ತಿಳಿದುಬಂದಿಲ್ಲ.

ನಿನ್ನೆ ಬುಧವಾರ ಮುಂಜಾನೆ ಪ್ರವೀಣ್ ತನ್ನ ತಂದೆಗೆ ಕರೆ ಮಾಡಿದ್ದ ವೇಳೆ ಅವರು ನಿದ್ರಿಸುತ್ತಿದ್ದ ಕಾರಣ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಘಟನೆಯ ಬಗ್ಗೆ ತಿಳಿದ ನಂತರ ಪ್ರವೀಣ್ ಅವರ ಪೋಷಕರು ಆಘಾತದ ಸ್ಥಿತಿಯಲ್ಲಿದ್ದಾರೆ ಎಂದು ಅರುಣ್ ಹೇಳಿದ್ದಾರೆ.

ಕುಟುಂಬವು ಹೈದರಾಬಾದ್‌ನ ನೆರೆಯ ರಂಗಾರೆಡ್ಡಿ ಜಿಲ್ಲೆಯವರು. ಶವಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿಯುತ್ತದೆ ಎಂದು ಅಮೆರಿಕದ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ಬಿ ಟೆಕ್ ಓದಿದ್ದ ಪ್ರವೀಣ್, 2023 ರಲ್ಲಿ ಎಂಎಸ್ ಮಾಡಲು ಅಮೆರಿಕಕ್ಕೆ ಹೋಗಿದ್ದರು. ಅವರು ಕಳೆದ ವರ್ಷ ಡಿಸೆಂಬರ್ ನಲ್ಲಿ ತೆಲಂಗಾಣಕ್ಕೆ ಬಂದು ಹೋಗಿದ್ದರು. ಕುಟುಂಬ ಸದಸ್ಯರು ಶಾಸಕರು ಮತ್ತು ಇತರ ರಾಜಕೀಯ ನಾಯಕರನ್ನು ಸಹಾಯಕ್ಕಾಗಿ ಯಾಚಿಸುತ್ತಿದ್ದಾರೆ.

ರಾಯಭಾರ ಕಚೇರಿ ಶೋಕ

ವಿದ್ಯಾರ್ಥಿ ಪ್ರವೀಣ್ ಕುಮಾರ್ ಅವರ ನಿಧನಕ್ಕೆ ಚಿಕಾಗೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ತೀವ್ರ ಶೋಕ ವ್ಯಕ್ತಪಡಿಸಿದೆ. ನಾವು ಅವರ ಕುಟುಂಬ ಮತ್ತು ವಿಶ್ವವಿದ್ಯಾಲಯದೊಂದಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸಂಪರ್ಕದಲ್ಲಿದ್ದೇವೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸಂತಾಪದಲ್ಲಿ ಭಾಗಿಯಾಗುತ್ತೇವೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ತೆಲಂಗಾಣದ ಕನಿಷ್ಠ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಇದೇ ರೀತಿ ಗುಂಡಿಕ್ಕಿ ಹತ್ಯೆಗೀಡಾಗಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಖಮ್ಮಂನ ಒಬ್ಬರು ಮತ್ತು ಈ ವರ್ಷದ ಜನವರಿಯಲ್ಲಿ ಹೈದರಾಬಾದ್‌ನ ಮತ್ತೊಬ್ಬರು ಅಮೆರಿಕದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT