ಸುಪ್ರೀಂಕೋರ್ಟ್, ಉದಯನಿಧಿ ಸ್ಟಾಲಿನ್ ಸಾಂದರ್ಭಿಕ ಚಿತ್ರ 
ದೇಶ

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯ ನಿಧಿ ವಿರುದ್ಧ ಹೊಸ FIR ದಾಖಲು ಬೇಡ- ಸುಪ್ರೀಂ ಕೋರ್ಟ್

ಸನಾತನ ಧರ್ಮ ನಿರ್ಮೂಲನೆ ಕುರಿತು ಉದಯ ನಿಧಿ ಸ್ಟಾಲಿನ್ 2023ರಲ್ಲಿ ನೀಡಿದ್ದ ಹೇಳಿಕೆಗೆ ತನ್ನ ಅನುಮತಿ ಇಲ್ಲದೆ ಹೊಸದಾಗಿ ಎಫ್ ಐಆರ್ ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ತಮಿಳುನಾಡು ಉಪಮುಖ್ಯಮಂತ್ರಿ ಎಂ.ಉದಯನಿಧಿ ಸ್ಟಾಲಿನ್ ಅವರಿಗೆ ಸುಪ್ರೀಂಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ‘ಸನಾತನ ಧರ್ಮ ನಿರ್ಮೂಲನೆ’ಹೇಳಿಕೆಗಾಗಿ ಯಾವುದೇ ಹೊಸ FIR ದಾಖಲಿಸಬಾರದು ಎಂದು ಆದೇಶಿಸಿದೆ.

ಸನಾತನ ಧರ್ಮ ನಿರ್ಮೂಲನೆ ಕುರಿತು ಉದಯ ನಿಧಿ ಸ್ಟಾಲಿನ್ 2023ರಲ್ಲಿ ನೀಡಿದ್ದ ಹೇಳಿಕೆಗೆ ತನ್ನ ಅನುಮತಿ ಇಲ್ಲದೆ ಹೊಸದಾಗಿ ಎಫ್ ಐಆರ್ ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಎಫ್‌ಐಆರ್‌ಗಳನ್ನು ವಿಚಾರಣೆ ಮಾಡುವ ನ್ಯಾಯಾಲಯಗಳಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವ ಮಧ್ಯಂತರ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ವಿಸ್ತರಿಸಿದೆ.

ಸ್ಟಾಲಿನ್ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರ ಅಲ್ಲದೇ ಪಾಟ್ನಾ, ಜಮ್ಮು, ಬೆಂಗಳೂರಿನಲ್ಲಿ ಎಫ್ ಐಆರ್ ದಾಖಲಾಗಿದ್ದು, ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ತಮಿಳುನಾಡಿಗೆ ವರ್ಗಾಯಿಸಬೇಕು ಎಂದು ಮನವಿ ಮಾಡಿದರು.

ಮಹಾರಾಷ್ಟ್ರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸನಾತನ ಧರ್ಮ ನಿರ್ಮೂಲನೆ ಸಮ್ಮೇಳನದಲ್ಲಿ ಮಲೇರಿಯಾ, ಕೊರೊನಾ, ಢೆಂಗೀ ತರಹ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಉದಯ ನಿಧಿ ಸ್ಟಾಲಿನ್ ಹೇಳಿದ್ದಾರೆ. ಬೇರೊಂದು ರಾಜ್ಯದ ಮುಖ್ಯಮಂತ್ರಿಗಳು, ಬೇರೊಂದು ಧರ್ಮದ ಬಗ್ಗೆಗಿನ ಇಂತಹ ಹೇಳಿಕೆಯನ್ನು ಶ್ಲಾಘಿಸುವರೇ, ಇಸ್ಲಾಂ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳುವರೇ, ಇದು ಸಹಿಸಲಾಗದು ಎಂದರು.

ತುಷಾರ್ ಮೆಹ್ತಾ ವಾದಕ್ಕೆ ಸಿಂಘ್ವಿ ಆಕ್ಷೇಪ ವ್ಯಕ್ತಪಡಿಸಿದರು. ಅಂತಿಮವಾಗಿ ವಾದ- ವಿವಾದ ಆಲಿಸಿದ ನ್ಯಾಯಪೀಠ, ತನ್ನ ಅನುಮತಿ ಇಲ್ಲದೆ ಹೊಸದಾಗಿ ಎಫ್ ಐಆರ್ ದಾಖಲಿಸಬಾರದು ಎಂದು ತೀರ್ಪು ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

SCROLL FOR NEXT