ಬಜೆಟ್ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ. 
ದೇಶ

'ಆಧುನಿಕ ಮುಸ್ಲಿಂ ಲೀಗ್ ಬಜೆಟ್': ಸಿಎಂ ಸಿದ್ದರಾಮಯ್ಯ ಸರ್ಕಾರದ ಬಜೆಟ್ ಟೀಕಿಸಿದ ಬಿಜೆಪಿ

ಕಾಂಗ್ರೆಸ್ ಸರ್ಕಾರವು ಸಾಂವಿಧಾನಿಕ ಮೌಲ್ಯಗಳನ್ನು 'ಹಿಂತೆಗೆದುಕೊಳ್ಳುತ್ತಿದೆ' ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಹಿತಾಸಕ್ತಿಗೆ ಮಾತ್ರ ಸಂಬಂಧಿಸಿದ ಹೇಳಿಕೆಗಳು ಮತ್ತು ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು.

ನವದೆಹಲಿ: ಇಂದು ಮಂಡಿಸಲಾದ ಬಜೆಟ್ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಶುಕ್ರವಾರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ 'ಆಧುನಿಕ ಮುಸ್ಲಿಂ ಲೀಗ್' ಬಜೆಟ್ ಆಗಿದೆ. ಕರ್ನಾಟಕ ಸರ್ಕಾರವು ಮುಹಮ್ಮದ್ ಅಲಿ ಜಿನ್ನಾ ಪಾಕಿಸ್ತಾನದಲ್ಲಿ ಹೇಗೆ ಸರ್ಕಾರ ಹೇಗೆ ನಡೆಸುತ್ತಿದ್ದನೋ, ಅದೇ ರೀತಿಯ ಸರ್ಕಾರವನ್ನು ರಾಜ್ಯದಲ್ಲಿ ನಡೆಸುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರವು ಸಾಂವಿಧಾನಿಕ ಮೌಲ್ಯಗಳನ್ನು 'ಹಿಂತೆಗೆದುಕೊಳ್ಳುತ್ತಿದೆ' ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಹಿತಾಸಕ್ತಿಗೆ ಮಾತ್ರ ಸಂಬಂಧಿಸಿದ ಹೇಳಿಕೆಗಳು ಮತ್ತು ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು.

'ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಆಧುನಿಕ ಮುಸ್ಲಿಂ ಲೀಗ್ ಬಜೆಟ್ ಅನ್ನು ಅಂಗೀಕರಿಸಿದೆ. ಈ ಆಧುನಿಕ ಮುಸ್ಲಿಂ ಲೀಗ್ ಬಜೆಟ್‌ನಲ್ಲಿ ಕಾಂಗ್ರೆಸ್ ಪಕ್ಷವು ಇಮಾಮ್‌ಗಳ ಗೌರವಧನವನ್ನು 6000 ರೂ.ಗಳಿಗೆ ಹೆಚ್ಚಿಸುತ್ತಿದೆ. ವಕ್ಫ್‌ಗೆ 150 ಕೋಟಿ ರೂ.ಗಳನ್ನು ನೀಡಲಾಗುತ್ತಿದೆ. ಸ್ವರಕ್ಷಣೆ ತರಬೇತಿಗಾಗಿ ಅಲ್ಪಸಂಖ್ಯಾತ ಹುಡುಗಿಯರಿಗೆ ಮಾತ್ರ ಹಣ ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಪ್ರಯೋಜನಕ್ಕಾಗಿ 1000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಬಳಸಲಾಗುತ್ತಿದೆ. ನಿನ್ನೆ, ಕರ್ನಾಟಕ ಸರ್ಕಾರವು ಹುಬ್ಬಳ್ಳಿ ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡಿದೆ. ಆದ್ದರಿಂದ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಮುಹಮ್ಮದ್ ಅಲಿ ಜಿನ್ನಾ ಪಾಕಿಸ್ತಾನದಲ್ಲಿ ಹೇಗೆ ಸರ್ಕಾರವನ್ನು ನಡೆಸುತ್ತಿದ್ದರೋ ಅದೇ ರೀತಿಯ ಸರ್ಕಾರವನ್ನು ರಾಜ್ಯದಲ್ಲಿ ನಡೆಸುತ್ತಿದೆ' ಎಂದು ಹೇಳಿದರು.

ಬಜೆಟ್ ಅನ್ನು ಟೀಕಿಸಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಇದನ್ನು 'ಸಾಲ ಆಧಾರಿತ' ಬಜೆಟ್ ಆಗಿದೆ. ರಾಜ್ಯದ ಆರ್ಥಿಕ ಶಿಸ್ತನ್ನು 'ಹಿಂತೆಗೆದುಕೊಳ್ಳುವಲ್ಲಿ' ಮತ್ತು ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಹೊಂದಿರುವ ಸರ್ಕಾರವನ್ನಾಗಿ ಮಾಡುವಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಇದು "ಸಾಲ ಆಧಾರಿತ" ಬಜೆಟ್!. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಹಿಮ್ಮೆಟ್ಟಿಸಿ, ಇತಿಹಾಸದಲ್ಲೇ ಅತ್ಯಧಿಕ ಸಾಲ ಹೊಂದಿದ ಸರ್ಕಾರವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಆದಾಯದ ಶೇ 27 ರಷ್ಟು ಸಾಲ, ವೆಚ್ಚದ ಶೇ 18 ರಷ್ಟು ಬಡ್ಡಿ!. ಕಾಂಗ್ರೆಸ್ ಸರ್ಕಾರ- "0" ಸರ್ಕಾರ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT