ಸಾಂದರ್ಭಿಕ ಚಿತ್ರ 
ದೇಶ

ಹರಿದ್ವಾರ: ಕಾಲೇಜು ಕ್ಯಾಂಪಸ್ ಆವರಣದಲ್ಲಿ ಇಫ್ತಾರ್ ಕೂಟ, ಬಜರಂಗದಳ ಕಾರ್ಯಕರ್ತರ ದಾಳಿ!

ಮೂರು ದಿನಗಳಲ್ಲಿ ಈ ವಿಷಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾಲೇಜು ಕ್ಯಾಂಪಸ್‌ಗೆ ಹೊರಗಿನವರನ್ನು ಕರೆತರುವ ಷಡ್ಯಂತ್ರದ ಭಾಗವಾಗಿ ಇಫ್ತಾರ್ ಕೂಟ ಆಯೋಜಿಸಲಾಗಿದೆ

ಹರಿದ್ವಾರ: ಹರಿದ್ವಾರದ ಋಷಿಕುಲ್ ಆಯುರ್ವೇದಿಕ್ ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಆಯೋಜಿಸಿದ ಇಫ್ತಾರ್ ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಲಾಗಿದೆ ಎಂದು ಆರೋಪಿಸಿ ಬಲಪಂಥೀಯ ಬಜರಂಗ ದಳ ಕಾರ್ಯಕರ್ತರು ಶನಿವಾರ ಸಂಜೆ ಮುತ್ತಿಗೆ ಹಾಕಿದರು. ತಕ್ಷಣ ಆಗಮಿಸಿದ ಪೊಲೀಸರು ಹೆಚ್ಚಿನ ಗಲಾಟೆಯಾಗದಂತೆ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಮೂರು ದಿನಗಳಲ್ಲಿ ಈ ವಿಷಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾಲೇಜು ಕ್ಯಾಂಪಸ್‌ಗೆ ಹೊರಗಿನವರನ್ನು ಕರೆತರುವ ಷಡ್ಯಂತ್ರದ ಭಾಗವಾಗಿ ಇಫ್ತಾರ್ ಕೂಟ ಆಯೋಜಿಸಲಾಗಿದೆ ಎಂದು ಬಜರಂಗದಳದ ಪದಾಧಿಕಾರಿ ಅಮಿತ್ ಕುಮಾರ್ ಆರೋಪಿಸಿದ್ದಾರೆ.

ಋಷಿಕುಲ ಆಯುರ್ವೇದಿಕ್ ಕಾಲೇಜಿಗೆ ಐತಿಹಾಸಿಕ ಮಹತ್ವವಿದೆ. ಪಂಡಿತ್ ಮಹಾಮಾನ ಮದನ್ ಮೋಹನ್ ಮಾಳವೀಯ ಅವರು ಸ್ಥಾಪಿಸಿದ ಋಷಿಕುಲ ವಿದ್ಯಾಪೀಠದಡಿ ಈ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗಿದೆ. ದೇಶಾದ್ಯಂತ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಇಲ್ಲಿಗೆ ಬರುತ್ತಾರೆ" ಎಂದು ಬಜರಂಗದಳದ ಪದಾಧಿಕಾರಿ ಹೇಳಿದರು.

ಹರಿದ್ವಾರ ಪ್ರದೇಶದಲ್ಲಿ ಹಿಂದೂಯೇತರರು ಇಂತಹ ಯಾವುದೇ ಕಾರ್ಯಕ್ರಮವನ್ನು ಆಯೋಜಿಸುವುದನ್ನು ಈಗಾಗಲೇ ಮುನ್ಸಿಪಲ್ ಕಾರ್ಪೊರೇಷನ್ ಬೈಲಾಗಳ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. "ಇಸ್ಲಾಮಿಕ್ ಜಿಹಾದ್ ಗಳು ಧಾರ್ಮಿಕ ನಗರದಲ್ಲಿ ಪಿತೂರಿ ನಡೆಸುತ್ತಿದ್ದಾರೆ. ಮೂರು ದಿನಗಳಲ್ಲಿ ತಪ್ಪಿತಸ್ಥ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಲು ಆಡಳಿತ ಮಂಡಳಿ ಕ್ರಮಕೈಗೊಳ್ಳದಿದ್ದರೆ, ಭಜರಂಗ ದಳ ಪ್ರತಿಭಟನೆ ತೀವ್ರಗೊಳಿಸುತ್ತದೆ ಎಂದು ಕುಮಾರ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT