ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ಕಳ್ಳಸಾಗಣೆ ಯತ್ನ ವಿಫಲ: ಬಾಂಗ್ಲಾದೇಶದ ಓರ್ವ ಪ್ರಜೆಯ ಹತ್ಯೆ- BSF

ಡಾರ್ಜಿಲಿಂಗ್ ಜಿಲ್ಲೆಯ ಖಲ್ಪಾರಾ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. 15-20 ಬಾಂಗ್ಲಾದೇಶಿ ದುಷ್ಕರ್ಮಿಗಳಿದ್ದ ಗುಂಪೊಂದು ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದೆ.

ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ರಕ್ಷಣಾ ಪಡೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದ್ದರಿಂದ ಬಾಂಗ್ಲಾದೇಶದ ಪ್ರಜೆಯೊಬ್ಬ ಸಾವನ್ನಪ್ಪಿದ್ದು, ಗಡಿ ಭದ್ರತಾ ಪಡೆ ಯೋಧ ಗಾಯಗೊಂಡಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಖಲ್ಪಾರಾ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. 15-20 ಬಾಂಗ್ಲಾದೇಶಿ ದುಷ್ಕರ್ಮಿಗಳಿದ್ದ ಗುಂಪೊಂದು ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದೆ.

ಈ ಗುಂಪಿಗೆ ಭಾರತದ ಕಡೆಯಿಂದ ಜಾನುವಾರ ಸಾಗಿಸಲು ಯತ್ನಿಸುತ್ತಿದ್ದ ದುಷ್ಕರ್ಮಿಗಳು ಸೇರಿಕೊಂಡಿದ್ದರು ಎಂದು ಬಿಎಸ್ ಎಫ್ ವಕ್ತಾರರು ವಕ್ತಾರರು ತಿಳಿಸಿದ್ದಾರೆ.

ಶರಣಾಗುವಂತೆ ಅವರನ್ನು ಬಿಎಸ್‌ಎಫ್ ಗಸ್ತು ಪಡೆ ಕೇಳಿಕೊಂಡಿದ್ದೆ. ಆದರೆ ಎಲ್ಲಾ ದುಷ್ಕರ್ಮಿಗಳು ಕುಡುಗೋಲು, ದೊಣ್ಣೆಗಳಿಂದ ದಾಳಿ ಮಾಡಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ದಾಳಿಕೋರರನ್ನು ಚದುರಿಸಲು BSF ಸೈನಿಕರು ಮಾರಕವಲ್ಲದ ಮದ್ದುಗುಂಡುಗಳನ್ನು ಹಾರಿಸಿದ್ದಾರೆ. ಆದರೆ ಅದಕ್ಕೂ ಜಗ್ಗದ ದುಷ್ಕರ್ಮಿಗಳು, ಯೋಧರೊಬ್ಬರಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಆಗ ಪ್ರಾಣಪಾಯವನ್ನು ಅರಿತ ಯೋಧ ತನ್ನ ರೈಫಲ್‌ನಿಂದ ಗುಂಡು ಹಾರಿಸಿದಾಗ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ವಕ್ತಾರರು ವಿವರಿಸಿದ್ದಾರೆ.

ಘಟನೆಯಲ್ಲಿ ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, BSF ಯೋಧರೊಬ್ಬರು ಗಾಯಗೊಂಡಿದ್ದಾರೆ. ಗಡಿ ಬೇಲಿಯನ್ನು ಬಾಂಗ್ಲಾದೇಶಿ ಕಳ್ಳಸಾಗಣೆದಾರರು ನಾಶಪಡಿಸಿರುವುದು ಕಂಡುಬಂದಿದೆ. ದುಷ್ಕರ್ಮಿಗಳು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಎರಡು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!

West Asia conflict: ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂಧನ ಭದ್ರತೆ ಸ್ಥಿರವಾಗಿದೆ- ಕೇಂದ್ರ ಸರ್ಕಾರ

IPL 2026: ಮಾ. 28ಕ್ಕೆ ಆರ್ ಸಿಬಿ vs ಸನ್ ರೈಸರ್ಸ್ ಹೈದರಾಬಾದ್ ಪಂದ್ಯ, ಮೆಟ್ರೋದಲ್ಲಿ ಫ್ರೀ ರೈಡ್, ಸಂಚಾರ ಅವಧಿ ವಿಸ್ತರಣೆ!

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ: ವದಂತಿಗಳಿಗೆ ಕಿವಿಗೂಡಬೇಡಿ, ಜನರಿಗೆ ರಾಜ್ಯ ಸರ್ಕಾರದ ಮನವಿ!

SCROLL FOR NEXT