ಬಘೇಲ್ ನಿವಾಸದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ online desk
ದೇಶ

ಭೂಪೇಶ್ ಬಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ED ಅಧಿಕಾರಿಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ದಾಳಿ!

ದಾಳಿಕೋರರು ಕಾಂಗ್ರೆಸ್ ಕಾರ್ಯಕರ್ತರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಬಘೇಲ್ ನಿವಾಸದಲ್ಲಿ ನಡೆದ ಶೋಧದಿಂದ ಅಸಮಾಧಾನಗೊಂಡಿದ್ದ ಗುಂಪು ಈ ಕೃತ್ಯ ಎಸಗಿದೆ.

ನವದೆಹಲಿ: ಮದ್ಯ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ್ದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ.

ದಾಳಿಕೋರರು ಕಾಂಗ್ರೆಸ್ ಕಾರ್ಯಕರ್ತರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಬಘೇಲ್ ನಿವಾಸದಲ್ಲಿ ನಡೆದ ಶೋಧದಿಂದ ಅಸಮಾಧಾನಗೊಂಡಿದ್ದ ಗುಂಪು ಈ ಕೃತ್ಯ ಎಸಗಿದೆ.

ಉಪ ನಿರ್ದೇಶಕ ಶ್ರೇಣಿಯ ED ಅಧಿಕಾರಿಯ ಕಾರಿನ ಮೇಲೂ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿಯ ದೃಶ್ಯಗಳಲ್ಲಿ ದೊಡ್ಡ ಗುಂಪು ED ಅಧಿಕಾರಿಗಳನ್ನು ಸುತ್ತುವರೆದು ಅವರನ್ನು ಥಳಿಸುತ್ತಿರುವುದು ಸೆರೆಯಾಗಿದೆ.

ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್, ಸಹಾಯಕ ಲಕ್ಷ್ಮಿ ನಾರಾಯಣ್ ಬನ್ಸಾಲ್ ಅಲಿಯಾಸ್ ಪಪ್ಪು ಬನ್ಸಾಲ್ ಮತ್ತು ಇತರ ಕೆಲವರ ನಿವಾಸದಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ ಶೋಧ ನಡೆಸಲಾಗಿದೆ.

ಚೈತನ್ಯ ಬಘೇಲ್ ಭಿಲಾಯಿ ನಿವಾಸದಲ್ಲಿ ತಮ್ಮ ತಂದೆಯೊಂದಿಗೆ ವಾಸವಿದ್ದಾರೆ. ಚೈತನ್ಯ ಬಘೇಲ್ ಮದ್ಯ ಹಗರಣದ ಪ್ರಮುಖ ಫಲಾನುಭವಿ ಎಂದು ಶಂಕಿಸಲಾಗಿದೆ. ರಾಜ್ಯದಲ್ಲಿ ಸುಮಾರು 14-15 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್