ಅರವಿಂದ್ ಕೇಜ್ರಿವಾಲ್ 
ದೇಶ

ನವದೆಹಲಿ: ಕೇಜ್ರಿವಾಲ್ ವಿರುದ್ಧ FIR ದಾಖಲಿಸಲು ಕೋರ್ಟ್ ನಿರ್ದೇಶನ! ಇದೇ ಕಾರಣ

ಬೃಹತ್ ಹೋರ್ಡಿಂಗ್‌ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ನವದೆಹಲಿ: ಎಎಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸುವ ರಾಷ್ಟ್ರ ರಾಜಧಾನಿಯ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ನಿರ್ದೇಶನ ನೀಡಿದೆ.

ಬೃಹತ್ ಹೋರ್ಡಿಂಗ್‌ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ದೆಹಲಿಯ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ 2007 ರ ಸೆಕ್ಷನ್ 3 ಮತ್ತಿತರ ಅಪರಾಧದಡಿ ತಕ್ಷಣವೇ ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ SHO ಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ಹೇಳಿದ್ದಾರೆ.

ಕೇಜ್ರಿವಾಲ್, ಆಗಿನ ಮಟಿಯಾಲಾ ಶಾಸಕ ಗುಲಾಬ್ ಸಿಂಗ್ (ಎಎಪಿ) ಮತ್ತು ಆಗಿನ ದ್ವಾರಕಾ ಎ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ಅವರು ವಿವಿಧ ಸ್ಥಳಗಳಲ್ಲಿ ಬೃಹತ್ ಗಾತ್ರದ ಹೋರ್ಡಿಂಗ್‌ ಹಾಕುವ ಮೂಲಕ ಉದ್ದೇಶಪೂರ್ವಕವಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ" ಎಂದು 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್