ತುಷಾರ್ ಗಾಂಧಿ 
ದೇಶ

ಕೇರಳ: ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ; BJP-RSS ಕಾರ್ಯಕರ್ತರ ಮೇಲೆ ಕೇಸ್ ದಾಖಲು

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2), 191 (2), 190 ಮತ್ತು 126 (2) ಅಡಿಯಲ್ಲಿ ಕಾನೂನುಬಾಹಿರ ಸಭೆ, ಗಲಭೆ ಮತ್ತು ಅಕ್ರಮ ನಿರ್ಬಂಧದ ಆರೋಪದಡಿಯಲ್ಲಿ ಪ್ರಕರಣ ದಾಖಲು.

ಕೇರಳ: ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಐವರು ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕರ್ತರ ಮೇಲೆ ಗುರುವಾರ ಕೇಸ್ ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2), 191 (2), 190 ಮತ್ತು 126 (2) ಅಡಿಯಲ್ಲಿ ಕಾನೂನುಬಾಹಿರ ಸಭೆ, ಗಲಭೆ ಮತ್ತು ಅಕ್ರಮ ನಿರ್ಬಂಧದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತ ತನಿಖೆ ನಡೆಯುತ್ತಿದ್ದು, ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಸಂಜೆ ಸಮೀಪದ ನೆಯ್ಯಟ್ಟಿಂಕರದಲ್ಲಿ ತುಷಾರ್ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮದ ಕೊನೆಯಲ್ಲಿ ಸಂಘಪರಿವಾರದೊಂದಿಗೆ ನಂಟು ಹೊಂದಿರುವ ಕೆಲ ಜನರು ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಕೇಸರಿ ಸಂಘಟನೆ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸುತ್ತಿರುವ ದೃಶ್ಯವನ್ನು ಕೆಲವು ಟಿವಿ ಚಾನೆಲ್ ಗಳು ಪ್ರಸಾರ ಮಾಡಿವೆ.

ಇದಕ್ಕೂ ಮುನ್ನಾ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ದಾಳಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅಡಗಿಸುವುವುದಕ್ಕೆ ಪ್ರಜಾಪ್ರಭುತ್ವ ಸಮಾಜದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಗಾಂಧೀವಾದಿ ದಿವಂಗತ ಪಿ ಗೋಪಿನಾಥನ್ ನಾಯರ್ ಅವರ ಪ್ರತಿಮೆ ಅನಾವರಣಗೊಳಿಸಲು ತುಷಾರ್ ಗಾಂಧಿ ನೆಯ್ಯಟಿಂಕರಕ್ಕೆ ಆಗಮಿಸಿದ್ದರು.

ಈ ವೇಳೆ ತಮ್ಮ ಭಾಷಣದಲ್ಲಿ ಯುಡಿಎಫ್ ಮತ್ತು ಎಲ್‌ಡಿಎಫ್ ಪರಸ್ಪರ ಪೈಪೋಟಿಯ ಸುದೀರ್ಘ ಇತಿಹಾಸವನ್ನು ಹೊಂದಿರುವ ರಾಜ್ಯದಲ್ಲಿ ಅತ್ಯಂತ ಅಪಾಯಕಾರಿ ಮತ್ತು ಕಪಟ ಶತ್ರು ಆರ್ ಎಸ್ ಎಸ್ ಮತ್ತು ಬಿಜೆಪಿ ಕೇರಳವನ್ನು ಪ್ರವೇಶಿಸಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT