ಅಶ್ವಿನಿ ವೈಷ್ಣವ್ 
ದೇಶ

ರೈಲ್ವೆ ಕಾಯ್ದೆಯು ಮಹಿಳಾ ಪ್ರಯಾಣಿಕರಿಗೆ ಮೀಸಲಾತಿ ಒದಗಿಸುತ್ತದೆ: ಅಶ್ವಿನಿ ವೈಷ್ಣವ್

ಹೆಚ್ಚಿನ ದೂರದ ಮೇಲ್/ಎಕ್ಸ್‌ಪ್ರೆಸ್ ರೈಲುಗಳಲ್ಲಿ ಎರಡನೇ ದರ್ಜೆಯ ಲಗೇಜ್-ಕಮ್ ಗಾರ್ಡ್ ಕೋಚ್ (SLR) ನಲ್ಲಿ ಮಹಿಳೆಯರಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

ನವದೆಹಲಿ: 1989 ರ ರೈಲ್ವೆ ಕಾಯ್ದೆಯು ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಬರ್ತ್‌ಗಳನ್ನು ಕಾಯ್ದಿರಿಸಲು ಅವಕಾಶ ನೀಡುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ವೈಷ್ಣವ್ ಅವರ ಪ್ರಕಾರ, ಕಾಯಿದೆಯ ಸೆಕ್ಷನ್ 58, ಮೇಲ್/ಎಕ್ಸ್‌ಪ್ರೆಸ್ ರೈಲುಗಳ ಸ್ಲೀಪರ್ ಕ್ಲಾಸ್‌ ಮತ್ತು ಗರೀಬ್ ರಥ/ರಾಜಧಾನಿ/ತುರೊಂಟೊ/ಸಂಪೂರ್ಣವಾಗಿ ಹವಾನಿಯಂತ್ರಿತ ಎಕ್ಸ್‌ಪ್ರೆಸ್ ರೈಲುಗಳ 3AC ಕ್ಲಾಸ್‌ನಲ್ಲಿ ಮಹಿಳಾ ಪ್ರಯಾಣಿಕರಿಗೆ ತಲಾ ಆರು ಬರ್ತ್‌ಗಳನ್ನು ಮೀಸಲಿಡಲು ಅವಕಾಶ ಕಲ್ಪಿಸುತ್ತದೆ.

ಮತ್ತೊಂದು ನಿಬಂಧನೆಯು ಸ್ಲೀಪರ್ ಕ್ಲಾಸ್‌ನಲ್ಲಿ ಪ್ರತಿ ಕೋಚ್‌ಗೆ ಆರರಿಂದ ಏಳು ಲೋವರ್ ಬರ್ತ್‌ಗಳು, 3AC ಕೋಚ್‌ನಲ್ಲಿ ತಲಾ ನಾಲ್ಕರಿಂದ ಐದು ಲೋವರ್ ಬರ್ತ್‌ಗಳು ಮತ್ತು 2AC ಕ್ಲಾಸ್ ಗಳಲ್ಲಿ ಹಿರಿಯ ನಾಗರಿಕರು, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳಾ ಪ್ರಯಾಣಿಕರು ಹಾಗೂ ಗರ್ಭಿಣಿಯರಿಗೆ ಮೂರರಿಂದ ನಾಲ್ಕು ಲೋವರ್ ಬರ್ತ್‌ಗಳನ್ನು ಕಾಯ್ದಿರಿಸಲು ಅವಕಾಶ ಇದೆ ಎಂದು ವೈಷ್ಣವ್ ಹೇಳಿದರು.

ಹೆಚ್ಚಿನ ದೂರದ ಮೇಲ್/ಎಕ್ಸ್‌ಪ್ರೆಸ್ ರೈಲುಗಳಲ್ಲಿ ಎರಡನೇ ದರ್ಜೆಯ ಲಗೇಜ್-ಕಮ್ ಗಾರ್ಡ್ ಕೋಚ್ (SLR) ನಲ್ಲಿ ಮಹಿಳೆಯರಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

EMU (ಎಲೆಕ್ಟ್ರಿಕಲ್ ಮಲ್ಟಿಪಲ್ ಯೂನಿಟ್)/DMU (ಡೀಸೆಲ್ ಮಲ್ಟಿಪಲ್ ಯೂನಿಟ್)/MMTS (ಮಲ್ಟಿ ಮಾಡಲ್ ಟ್ರಾನ್ಸ್‌ಪೋರ್ಟ್ ಸಿಸ್ಟಮ್) ಗೆ ಸಂಬಂಧಿಸಿದಂತೆ, ಬೇಡಿಕೆಯ ಮೇರೆಗೆ ಮಹಿಳಾ ಪ್ರಯಾಣಿಕರಿಗೆ ವಿಶೇಷ ಕಾಯ್ದಿರಿಸದ ಕೋಚ್‌ಗಳು/ವಿಭಾಗಗಳನ್ನು ಉಚಿತವಾಗಿ ನೀಡಬಹುದು ಎಂದು ರೈಲ್ವೆ ಸಚಿವಾಲಯ ಹೇಳಿದೆ.

ಮುಂಬೈ, ಕೋಲ್ಕತ್ತಾ, ಸಿಕಂದರಾಬಾದ್ ಮತ್ತು ಚೆನ್ನೈನ ಉಪನಗರ ವಿಭಾಗಗಳಲ್ಲಿ ಹಾಗೂ ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶದ ವಿಭಾಗಗಳಲ್ಲಿ ಮಹಿಳೆಯರ ವಿಶೇಷ EMU/MEMU/MMTS ಸೇವೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ವೈಷ್ಣವ್ ಮೇಲ್ಮನೆಗೆ ತಿಳಿಸಿದರು.

ದುರ್ಬಲ ಮತ್ತು ಗುರುತಿಸಲಾದ ಮಾರ್ಗಗಳು/ವಿಭಾಗಗಳಲ್ಲಿ, ಮಹಿಳೆಯರ ಸುರಕ್ಷತೆಗಾಗಿ ಸರ್ಕಾರಿ ರೈಲ್ವೆ ಪೊಲೀಸರ (GRP) ಜೊತೆಗೆ, ರೈಲ್ವೆ ರಕ್ಷಣಾ ಪಡೆ (RPF)ಯಿಂದ ರೈಲುಗಳಿಗೆ ಬೆಂಗಾವಲು ನೀಡಲಾಗುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT