ಡಿ. ಉದಯ ಕುಮಾರ್  
ದೇಶ

ರುಪಾಯಿ ಚಿಹ್ನೆ ಬದಲು ವಿವಾದ: ‘₹’ ಲೋಗೋ ಸೃಷ್ಟಿಸಿದ ಡಿಎಂಕೆ ಮಾಜಿ ಶಾಸಕನ ಪುತ್ರ ಪ್ರತಿಕ್ರಿಯೆ ನೀಡಲು ನಿರಾಕರಣೆ

ದಕ್ಷಿಣ ರಾಜ್ಯದ ಡಿಎಂಕೆ ಸರ್ಕಾರವು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿರುವ 2025-26ನೇ ಸಾಲಿನ ಬಜೆಟ್‌ಗಾಗಿ ತನ್ನ ಲೋಗೋದಲ್ಲಿ ಭಾರತದ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರದೊಂದಿಗೆ ಬದಲಾಯಿಸಿದೆ.

ಗುವಾಹಟಿ: ತಮಿಳುನಾಡು ಸರ್ಕಾರ ರಾಜ್ಯ ಬಜೆಟ್‌ಗಾಗಿ ಹೊಸ ರೂಪಾಯಿ ಲೋಗೋವನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ನಂತರ, ಭಾರತದ ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿದ ಐಐಟಿ ಗುವಾಹಟಿ ಪ್ರಾಧ್ಯಾಪಕ ಡಿ. ಉದಯ ಕುಮಾರ್ ಅವರು ಗುರುವಾರ ಭಾಷೆಯ ವಿವಾದಕ್ಕೆ ಸಿಲುಕಲು ನಿರಾಕರಿಸಿದ್ದಾರೆ ಮತ್ತು ತಮ್ಮ ತಂದೆ ಡಿಎಂಕೆ ಮಾಜಿ ಶಾಸಕರಾಗಿರುವುದು ಕೇವಲ ಕಾಕತಾಳೀಯ ಎಂದು ಹೇಳಿದ್ದಾರೆ.

ದಕ್ಷಿಣ ರಾಜ್ಯದ ಡಿಎಂಕೆ ಸರ್ಕಾರವು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿರುವ 2025-26ನೇ ಸಾಲಿನ ಬಜೆಟ್‌ಗಾಗಿ ತನ್ನ ಲೋಗೋದಲ್ಲಿ ಭಾರತದ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರದೊಂದಿಗೆ ಬದಲಾಯಿಸಿದೆ. ಈ ಕ್ರಮವು ಬಿಜೆಪಿಯ ಕೋಪಕ್ಕೆ ಕಾರಣವಾಗಿದೆ.

"ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಬದಲಾವಣೆಯ ಅಗತ್ಯವಿದೆ ಎಂದು ಇದ್ದಕ್ಕಿದ್ದಂತೆ ಸರ್ಕಾರ ತಮ್ಮದೇ ಆದ ಸ್ಕ್ರಿಪ್ಟ್ ಅನ್ನು ಕಾರ್ಯಗತಗೊಳಿಸಲು ತಿಳಿಸಿದರು. ಇದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು. ಆದ್ದರಿಂದ, ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಇದು ಸಂಪೂರ್ಣವಾಗಿ ಸರ್ಕಾರಕ್ಕೆ ಬಿಟ್ಟದ್ದು" ಎಂದು ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಕುಮಾರ್ ಅವರ ತಂದೆ ಎನ್ ಧರ್ಮಲಿಂಗಂ 1971 ರಲ್ಲಿ ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಪಕ್ಷದಿಂದ ರಿಷಿವಂಡಿಯಂ ಕ್ಷೇತ್ರದಿಂದ ಶಾಸಕರಾಗಿದ್ದರು.

"ನನ್ನ ತಂದೆ ನಾನು ಹುಟ್ಟುವ ಮೊದಲೇ ಶಾಸಕರಾಗಿದ್ದರು. ಈಗ ಅವರಿಗೆ ವಯಸ್ಸಾಗಿದೆ ಮತ್ತು ನಮ್ಮ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಶಾಂತಿಯುತವಾಗಿ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಇದು ಕಾಕತಾಳೀಯವಾಗಿದೆ" ಎಂದು ಪ್ರಾಧ್ಯಾಪಕರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT