ದೇಶ

ಗುಜರಾತ್: ವೇಗವಾಗಿ ಕಾರು ಚಲಾಯಿಸಿ ಮಹಿಳೆ ಕೊಂದು ರಸ್ತೆ ಮಧ್ಯೆ 'ಓಂ ನಮಃ ಶಿವಾಯ' ಘೋಷಣೆ; LLB ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ, Video!

ಗುಜರಾತ್ ರಾಜ್ಯದ ವಡೋದರದ ಕರೇಲಿಬಾಗ್ ಪ್ರದೇಶದಲ್ಲಿ ಕಳೆದ ರಾತ್ರಿ LLB ವಿದ್ಯಾರ್ಥಿಯೊಬ್ಬ ವೇಗವಾಗಿ ಕಾರು ಚಲಾಯಿಸಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ವಡೋದರ: ಗುಜರಾತ್ ರಾಜ್ಯದ ವಡೋದರದ ಕರೇಲಿಬಾಗ್ ಪ್ರದೇಶದಲ್ಲಿ ಕಳೆದ ರಾತ್ರಿ LLB ವಿದ್ಯಾರ್ಥಿಯೊಬ್ಬ ವೇಗವಾಗಿ ಕಾರು ಚಲಾಯಿಸಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ನಂತರ ಪಾನಮತ್ತ ಚಾಲಕನ ಕ್ರೂರ ಅನುಚಿತ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಗಿದ್ದು ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಅಪಘಾತ ಮಧ್ಯರಾತ್ರಿ 12.30ರ ಸುಮಾರಿಗೆ ಅಮ್ರಪಾಲಿ ಚಾರ್ ಮುಕ್ತಾನಂದ ಕ್ರಾಸ್ ರಸ್ತೆಯಲ್ಲಿ ನಡೆದಿತ್ತು. ಕಪ್ಪು ಕಾರಿನಲ್ಲಿ ವೇಗವಾಗಿ ಬಂದ ಎಂಎಸ್ ವಿಶ್ವವಿದ್ಯಾಲಯದ 20 ವರ್ಷದ ಕಾನೂನು ವಿದ್ಯಾರ್ಥಿ ರಕ್ಷಿತ್ ರವೀಶ್ ಚೌರಾಸಿಯಾ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದನು.

ಅಪಘಾತದ ನಂತರ ರಕ್ಷಿತ್ ರವೀಶ್ ಕುಡಿದ ಮತ್ತಿನಲ್ಲಿ ತೀವ್ರವಾಗಿ ಹಾನಿಗೊಳಗಾದ ವಾಹನದಿಂದ ಹೊರಗೆ ಬಂದು ಪಶ್ಚಾತ್ತಾಪವಿಲ್ಲದೆ ದುರ್ವರ್ತನೆ ತೋರಿಸಿದ್ದನು. ಇನ್ನೊಂದು ಸುತ್ತು, ಇನ್ನೊಂದು ಸುತ್ತು ಎಂದು ಕೂಗುತ್ತಾ ಓಂ ನಮಃ ಶಿವಾಯ ಎಂದು ಕೂಗುತ್ತಿರುವುದು ಕಾಣಬಹುದು. ಸ್ಥಳೀಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದರು. ಅಪಘಾತದ ವೇಳೆ ರಕ್ಷಿತ್ ರವೀಶ್ ಚೌರಾಸಿಯಾ ಜೊತೆಗಿದ್ದ ಆತನ ಸಹಚರ ಪ್ರಾಂಶು ಚೌಹಾಣ್ ನನ್ನು ಸಹ ಬಂಧಿಸಲಾಗಿದೆ.

ಉತ್ತರ ಪ್ರದೇಶದ ವಾರಣಾಸಿಯ ಮೂಲದ ಚೌರಾಸಿಯಾ ಕಾನೂನು ವಿದ್ಯಾರ್ಥಿನಿಯಾಗಿದ್ದು, ಇಲ್ಲಿನ ಪಿಜಿ ವಸತಿಗೃಹದಲ್ಲಿ ವಾಸವಾಗಿದ್ದನು. ಪ್ರತ್ಯಕ್ಷದರ್ಶಿಯೊಬ್ಬರು ಈ ಘಟನೆಯನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ