ಅಮೃತಸರದಲ್ಲಿರುವ ಸ್ವರ್ಣ ಮಂದಿರ 
ದೇಶ

ಅಮೃತಸರ: ಸ್ವರ್ಣ ಮಂದಿರದಲ್ಲಿ ಕಬ್ಬಿಣದ ರಾಡ್‌ನಿಂದ ಜನರ ಮೇಲೆ ದಾಳಿ; ಐವರಿಗೆ ಗಾಯ

ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಮೃತಸರ: ಅಮೃತಸರದ ಸ್ವರ್ಣ ಮಂದಿರ ಆವರಣದಲ್ಲಿ ಶುಕ್ರವಾರ ದುಷ್ಕರ್ಮಿಯೊಬ್ಬ ಕಬ್ಬಿಣದ ರಾಡ್‌ನಿಂದ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಶ್ರೀ ಗುರು ರಾಮದಾಸ್ ಸರೈನಲ್ಲಿ ದುಷ್ಕರ್ಮಿಯೊಬ್ಬ ಕಬ್ಬಿಣದ ರಾಡ್‌ನಿಂದ ಜನರ ಮೇಲೆ ದಾಳಿ ಮಾಡಿದ್ದಾರೆ. ಮಂದಿರದ ಒಳಗೇ ದಾಳಿ ನಡೆದಿರುವುದು ಸಿಖ್ ಸಮುದಾಯದವರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಹಲ್ಲೆಕೋರನನ್ನು ಜುಲ್ಫಾನ್ ಎಂದು ಗುರುತಿಸಲಾಗಿದ್ದು, ಆತನನ್ನು ಹಿಡಿದು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ(ಎಸ್‌ಜಿಪಿಸಿ) ಜುಲ್ಫಾನ್ ಎಂಬ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದೆ. ಸ್ವರ್ಣ ಮಂದಿರ ಆವರಣದಲ್ಲಿ ಘರ್ಷಣೆ ನಡೆದಿದ್ದು, ಎರಡೂ ಕಡೆಯ ಜನರು ಗಾಯಗೊಂಡಿದ್ದಾರೆ. ಎಸ್‌ಜಿಪಿಸಿ ಕಾರ್ಯಕರ್ತರು ಸಹ ಗಾಯಗೊಂಡಿದ್ದಾರೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೊಟ್ವಾಲಿ ಎಸ್‌ಎಚ್‌ಒ ಸರ್ಮೆಲ್ ಸಿಂಗ್ ಅವರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಅಮೃತಸರದ ಗುರು ರಾಮದಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್