ದೇಶ

ಪವಿತ್ರ Ramzan ತಿಂಗಳಲ್ಲಿ ದೊಡ್ಡ 'ಪಾಪ' ಮಾಡಿದ್ದೀರಿ: ಹೋಳಿ ಆಡಿದ್ದ ಮೊಹಮ್ಮದ್ ಶಮಿ ಮಗಳು, ಮತಾಂಧರಿಂದ ತೀವ್ರ ತರಾಟೆ!

ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಇತ್ತೀಚಿನ ದಿನಗಳಲ್ಲಿ ಟೀಕೆಗಳಿಂದ ಸುತ್ತುವರೆದಿದ್ದಾರೆ.

ನವದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಇತ್ತೀಚಿನ ದಿನಗಳಲ್ಲಿ ಟೀಕೆಗಳಿಂದ ಸುತ್ತುವರೆದಿದ್ದಾರೆ. ಇಂದು ಭಾರತದಾದ್ಯಂತ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಲಾಯಿತು. ಈ ಮಧ್ಯೆ ಮೊಹಮ್ಮದ್ ಶಮಿ ಮಗಳು ಹೋಳಿ ಆಡಿದ್ದ ಚಿತ್ರವನ್ನು ಶಮಿ ಅವರ ಮಾಜಿ ಪತ್ನಿ ಹಸೀನ್ ಜಹಾನ್ ಸ್ವತಃ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಶಮಿ ಅವರ ಮಗಳು ಐರಾ ಶಮಿ ಅವರ ಬಟ್ಟೆಗಳಿಗೆ ಬಣ್ಣ ಬಳಿಯಲಾಗಿದೆ. ಆದರೆ ಜನರು ಹಸೀನ್ ಜಹಾನ್ ಅವರನ್ನು ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.

ಮುಸ್ಲಿಂ ಸಮುದಾಯದವರಾಗಿದ್ದೂ ಪವಿತ್ರ ರಂಜಾನ್ ತಿಂಗಳಲ್ಲಿ ಹೋಳಿ ಹಬ್ಬವನ್ನು ಆಚರಿಸಿದ್ದೀರಾ? ಅದು ದೊಡ್ಡ ಪಾಪ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಹಸೀನ್ ಜಹಾನ್ ತಮ್ಮ ಮಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಹಂಚಿಕೊಳ್ಳುತ್ತಾರೆ. ತಮ್ಮ ಮಗಳು ಐರಾ ಹೋಳಿ ಆಡುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಕ್ಕಾಗಿ ತೀವ್ರ ಟ್ರೋಲಿಂಗ್ ಎದುರಿಸಬೇಕಾಗುತ್ತದೆ ಎಂದು ಅವರು ಊಹಿಸಿರಲಿಕ್ಕಿಲ್ಲ. ಕಾಮೆಂಟ್ ವಿಭಾಗದಲ್ಲಿ ಅನೇಕ ಜನರು ಹಸೀನ್ ಜಹಾನ್ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಆದರೆ ಯಾರೋ ಒಬ್ಬರು ಮಾತ್ರ ದುರದೃಷ್ಟವಶಾತ್ ನಮ್ಮ ಸಮಾಜದಲ್ಲಿ ಅಂತಹ ಜನರಿದ್ದಾರೆ ಎಂದು ಹೇಳಿದರು. ಒಬ್ಬ ವ್ಯಕ್ತಿ ಹಸೀನ್ ಜಹಾನ್ ಮುಸ್ಲಿಂ ಆಗಿದ್ದಾರೋ ಇಲ್ಲವೋ ಎಂದು ಕೂಡ ಪ್ರಶ್ನಿಸಿದ್ದಾರೆ.

ಹಸೀನ್ ಜಹಾನ್ ಅವರನ್ನು ಟ್ರೋಲ್ ಮಾಡುವ ಕಾಮೆಂಟ್‌ಗಳು ಇಲ್ಲಿಗೆ ನಿಲ್ಲಲಿಲ್ಲ. ಒಬ್ಬ ವ್ಯಕ್ತಿ ಮೊಹಮ್ಮದ್ ಶಮಿ ಅವರ ಪತ್ನಿಯನ್ನು 'ಅಜ್ಞಾನಿ ಮಹಿಳೆ' ಎಂದು ಕರೆದಿದ್ದಾರೆ. ರಂಜಾನ್ ತಿಂಗಳಲ್ಲಿ ಹೀಗೆ ಮಾಡಿದ್ದಕ್ಕೆ ತನಗೆ ನಾಚಿಕೆಯಾಗುತ್ತಿಲ್ಲ ಎಂದು ಆ ವ್ಯಕ್ತಿ ಕೇಳಿದ್ದಾನೆ. ಹಸೀನ್ ಜಹಾನ್ ಅವರನ್ನು ನಿರ್ಬಂಧಿಸುವಂತೆ ಅವನು ಇತರರನ್ನು ಒತ್ತಾಯಿಸಿದ್ದಾನೆ.

ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ 2014ರಲ್ಲಿ ಹಸಿನ್ ಜಹಾನ್ ಅವರನ್ನು ವಿವಾಹವಾದರು. 2018ರಲ್ಲಿ ಶಮಿ ವಿರುದ್ಧ ಕೌಟುಂಬಿಕ ದೌರ್ಜನ್ಯ, ಕಿರುಕುಳ, ವಿಷಪ್ರಾಶನ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗುವ ಹೊತ್ತಿಗೆ ಅವರು ಮದುವೆಯಾಗಿ ಕೇವಲ 4 ವರ್ಷಗಳಾಗಿತ್ತು. ಶಮಿ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದರೂ, ಶಮಿ ಬೇರೆ ಮಹಿಳೆಯರೊಂದಿಗೆ ಸಂಬಂಧ ಹೊಂದಿರುವುದಾಗಿ ಹಸಿನ್ ಜಹಾನ್ ಹೇಳಿಕೊಂಡಿದ್ದಾರೆ. ಅಂದಿನಿಂದ ಇಬ್ಬರ ನಡುವಿನ ಅಂತರ ಹೆಚ್ಚಾಗತೊಡಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT