ಪಂಜಾಬ್ ಸಿಎಂ ಭಗವಂತ್ ಮಾನ್ 
ದೇಶ

ರಾಜಕೀಯ ಎದುರಾಳಿಗಳನ್ನು ಮುಗಿಸಲು ಬಿಜೆಪಿ ಕ್ಷೇತ್ರ ಪುನರ್ ವಿಂಗಡಣೆ ಅಸ್ತ್ರ ಬಳಕೆ: ಪಂಜಾಬ್ ಸಿಎಂ ಮಾನ್

ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಹ ಕೇಂದ್ರ ಸರ್ಕಾರದ ಪ್ರಯತ್ನದ ವಿರುದ್ಧ ದೇಶಾದ್ಯಂತ ಸಮಾನ ಮನಸ್ಕ ಪಕ್ಷಗಳು ಹೋರಾಡಬೇಕಾಗಿದೆ ಎಂದು ತಿಳಿಸಿದರು.

ಚಂಢೀಗಡ: ದೇಶದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡುವ ಮೂಲಕ ತನ್ನ ರಾಜಕೀಯ ಎದುರಾಳಿಗಳನ್ನು ಮುಗಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಆರೋಪಿಸಿದ್ದಾರೆ.

72 ಶಿಕ್ಷಕರನ್ನೊಳಗೊಂಡ ತಂಡವನ್ನು ಫಿನ್ಯಾಂಡ್ ಗೆ ಕಳುಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಮಾನ್, ಕೇಂದ್ರ ಸರ್ಕಾರದ ಅಪ್ರಜಾಸತಾತ್ಮಕ ವಿಧಾನ ಸಾಕಷ್ಟು ಅನುಮಾನಗಳನ್ನು ಹುಟ್ಟಿಸಿದೆ ಎಂದರು.

ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು ದುರ್ಬಲವಾಗಿರುವ ರಾಜ್ಯಗಳಲ್ಲಿ ಸೀಟುಗಳ ಸಂಖ್ಯೆಯನ್ನು ಯೋಜಿತ ರೀತಿಯಲ್ಲಿ ಇಳಿಸಿ, ಬಿಜೆಪಿ ಪ್ರಾಬಲ್ಯವಿರು ರಾಜ್ಯಗಳಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಹ ಕೇಂದ್ರ ಸರ್ಕಾರದ ಪ್ರಯತ್ನದ ವಿರುದ್ಧ ದೇಶಾದ್ಯಂತ ಸಮಾನ ಮನಸ್ಕ ಪಕ್ಷಗಳು ಹೋರಾಡಬೇಕಾಗಿದೆ ಎಂದು ತಿಳಿಸಿದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ ಮಾನ್, ಪಂಜಾಬ್ ಗಡಿ ರಾಜ್ಯವಾಗಿರುವುದರಿಂದ ಹಲವಾರು ಶತ್ರು ಶಕ್ತಿಗಳಿಂದ ಗುರಿಯಾಗುತ್ತಿದೆ. ಶಾಂತಿಯನ್ನು ಕದಡುವ ಪ್ರಯತ್ನಗಳನ್ನು ಪಂಜಾಬ್ ಪೊಲೀಸರು ಯಶಸ್ವಿಯಾಗಿ ಎದುರಿಸಿದ್ದಾರೆ ಎಂದರು.

ಅಮೃತಸರ ಘಟನೆಯು ರಾಜ್ಯದ ಶಾಂತಿ, ಪ್ರಗತಿ ಮತ್ತು ಸಮೃದ್ಧಿಯನ್ನು ಅಸ್ಥಿರಗೊಳಿಸಲು ಬಯಸುವ ಉಗ್ರರ ಕೈವಾಡವಾಗಿದೆ. ರಾಜ್ಯ ಸರ್ಕಾರ ಅಂತಹ ಎಲ್ಲಾ ಸಂಚುಗಳನ್ನು ವಿಫಲಗೊಳಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT