ತೇಜ್ ಪ್ರತಾಪ್ ಸಿಂಗ್ ಯಾದವ್ 
ದೇಶ

'ಡ್ಯಾನ್ಸ್ ಮಾಡು, ಇಲ್ಲದಿದ್ದರೆ ಸಸ್ಪೆಂಡ್ ಆಗ್ತೀಯಾ': ಪೊಲೀಸ್ ಅಧಿಕಾರಿಗೆ ತೇಜ್ ಪ್ರತಾಪ್ ವಾರ್ನಿಂಗ್; ವಿಡಿಯೋ

ಶುಕ್ರವಾರ ಪಾಟ್ನಾದಲ್ಲಿನ ತನ್ನ ನಿವಾಸದ ಬಳಿ ಹೋಳಿ ಸಂಭ್ರಮಾಚರಣೆ ವೇಳೆಯಲ್ಲಿ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸ್ ಅಧಿಕಾರಿಗೆ ತೇಜ್ ಪ್ರತಾಪ್ ಡ್ಯಾನ್ಸ್ ಮಾಡುವಂತೆ ಹೇಳಿದ್ದಾರೆ.

ಪಾಟ್ನಾ: ಯೂರ್ನಿಫಾರ್ಮ್ ನಲ್ಲಿದ್ದ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡುವಂತೆ ರಾಷ್ಟ್ರೀಯ ಜನತಾದಳ (ಆರ್ ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಆದೇಶಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೌದು. ಶುಕ್ರವಾರ ಪಾಟ್ನಾದಲ್ಲಿನ ತನ್ನ ನಿವಾಸದ ಬಳಿ ಹೋಳಿ ಸಂಭ್ರಮಾಚರಣೆ ವೇಳೆಯಲ್ಲಿ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸ್ ಅಧಿಕಾರಿಗೆ ತೇಜ್ ಪ್ರತಾಪ್ ಡ್ಯಾನ್ಸ್ ಮಾಡುವಂತೆ ಹೇಳಿದ್ದಾರೆ. ಡ್ಯಾನ್ಸ್ ಮಾಡಲು ನಿರಾಕರಿಸಿದರೆ ಸಸ್ಪೆಂಡ್ ಆಗ್ತೀಯಾ ಎಂದು ಹೇಳುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪಕ್ಷದ ಕಾರ್ಯಕರ್ತರೊಂದಿಗೆ ಹೋಳಿ ಹಬ್ಬ ಆಚರಿಸುತ್ತಿದ್ದ ಯಾದವ್, ಗೀತೆಯೊಂದನ್ನು ಡ್ಯಾನ್ಸ್ ಮಾಡುವಂತೆ ಪೊಲೀಸ್ ಅಧಿಕಾರಿಗೆ ನಿರ್ದೇಶಿಸುವುದು ವಿಡಿಯೋದಲ್ಲಿದೆ. ಯಾದವ್ ನಡೆಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟೀಕಿಸುತ್ತಿದ್ದರೆ ಮತ್ತೆ ಕೆಲವರು ಹೋಳಿಯಲ್ಲಿ ಇದು ಚಿಕ್ಕ ತಮಾಷೆ ಅಷ್ಟೇ ಎಂದಿದ್ದಾರೆ.

ನಾನು ಸಾಂಗ್ ಹೇಳ್ತಿನಿ, ನೀನು ಡ್ಯಾನ್ಸ್ ಮಾಡು. ಇಲ್ಲದಿದ್ದರೆ ಸಸ್ಪೆಂಡ್ ಆಗ್ತೀಯಾ. ಕೆಟ್ಟದಾಗಿ ಯೋಚಿಸಬೇಡ. ಇದು ಹೋಳಿ ಎಂದು ತೇಜ್ ಪ್ರತಾಪ್ ಯಾದವ್ ಪೊಲೀಸ್ ಅಧಿಕಾರಿಗೆ ಹೇಳ್ತಾರೆ. ಈ ಘಟನೆಗೆ ಮೈತ್ರಿ ಪಾಲುದಾರ ಪಕ್ಷ ಕಾಂಗ್ರೆಸ್ ಸೇರಿದಂತೆ ಜೆಡಿಯು, ಬಿಜೆಪಿ ತೀವ್ರವಾಗಿ ಟೀಕಿಸಿವೆ. ಜಂಗಲ್ ರಾಜ್ ಕೊನೆಯಾಗಿದೆ. ಆದರೆ, ಡ್ಯಾನ್ಸ್ ಮಾಡದಿದ್ದರೆ ಸಸ್ಪೆಂಡ್ ಮಾಡುವುದಾಗಿ ಲಾಲು ಪುತ್ರ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ.

ಬಿಹಾರ ಈಗ ಬದಲಾಗಿದೆ. ಬಿಹಾರದಲ್ಲಿ ಬದಲಾದ ಪರಿಸರದಲ್ಲಿ ಇಂತಹ ನಡವಳಿಕೆಗಳು ನಡೆಯುವುದಿಲ್ಲ ಎಂಬುದನ್ನು ತೇಜಸ್ವಿ ಯಾದವ್, ತೇಜ್ ಪ್ರತಾಪ್ ಯಾದವ್ ಅಥವಾ ಅಥವಾ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಯಾವುದೇ ಸದಸ್ಯರು ಅರ್ಥ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಜೆಡಿಯು ವಕ್ತಾರ ರಾಜೀವ್ ರಂಜನ್ ಪ್ರಸಾದ್ ಹೇಳಿದ್ದಾರೆ.

ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ಆರ್ ಜೆಡಿಯ ಸಂಪ್ರದಾಯವಾಗಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಲ್ಲ ಆರೋಪಿಸಿದ್ದಾರೆ. ಇದು ದುರಾದೃಷ್ಟಕರ ಘಟನೆಯಾಗಿದೆ. ತೇಜ್ ಪ್ರತಾಪ್ ಹೇಳಿರುವುದನ್ನು ಖಂಡಿಸುತ್ತೇನೆ. ಸಸ್ಪೆಂಡ್ ಮಾಡುವ ಅಧಿಕಾರ ನನಗಿಲ್ಲ ಎಂಬುದನ್ನು ಅವರು ಅರಿತಿಲ್ಲ ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT