ಎ ಆರ್ ರೆಹಮಾನ್  
ದೇಶ

ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಗೆ ಅಸೌಖ್ಯ: ತಪಾಸಣೆ ಮುಗಿಸಿ ಮನೆಗೆ ವಾಪಸ್

ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ತಮ್ಮ ಚಿತ್ರ ಚಾವಾ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.

ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಎ.ಆರ್‌ ರೆಹಮಾನ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು.

ಇದ್ದಕ್ಕಿದ್ದಂತೆ ಅಸೌಖ್ಯಕ್ಕೀಡಾದ ಕೂಡಲೇ ರೆಹಮಾನ್ ಅವರನ್ನು ಚೆನ್ನೈ ಗ್ರೀಮ್ಸ್ ರಸ್ತೆಯಲ್ಲಿ ಅಪೋಲೋ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ನಿಗದಿತ ಆರೋಗ್ಯ ತಪಾಸಣೆ ಮಾಡಿ ಕೆಲ ಹೊತ್ತಿನಲ್ಲಿ ಆಸ್ಪತ್ರೆಯಿಂದ ಮನೆಗೆ ಹಿಂತಿರುಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಡಿಹೈಡ್ರೇಷನ್ ಸಮಸ್ಯೆಯಿಂದ ಅಸೌಖ್ಯಕ್ಕೀಡಾಗಿ ಆಸ್ಪತ್ರೆಗೆ ಬಂದಿದ್ದರು.

ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ತಮ್ಮ ಚಿತ್ರ ಚಾವಾ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.

ಎ.ಆರ್ ರೆಹಮಾನ್ ಅವರಿಗೆ 58 ವರ್ಷ ವಯಸ್ಸಾಗಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಇತ್ತೀಚೆಗೆ ಪತ್ನಿಯಿಂದ ಡಿವೋರ್ಸ್ ಪಡೆದು ಸುದ್ದಿಯಾಗಿದ್ದರು. ಸುಮಾರು 29 ವರ್ಷಗಳ ದಾಂಪತ್ಯದ ನಂತರ, ಕಳೆದ ವರ್ಷ ನವೆಂಬರ್ ನಲ್ಲಿ ಸೈರಾ ಬಾನು ಮತ್ತು ಎಆರ್ ರೆಹಮಾನ್ ಬೇರ್ಪಡುವುದಾಗಿ ಪ್ರಕಟಿಸಿದ್ದರು. ಮಾಜಿ ಪತ್ನಿ ಸಾಯಿರಾ ಬಾನು ಕೂಡ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು.

ಆರೋಗ್ಯ ಸ್ಥಿರವಾಗಿದೆ ಎಂದ ಸಿಎಂ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರೆಹಮಾನ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದು, ತಾವು ವೈದ್ಯರೊಂದಿಗೆ ಮಾತನಾಡಿದ್ದು ರೆಹಮಾನ್ ಅವರು ಚೆನ್ನಾಗಿದ್ದಾರೆ, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ತಿಳಿಸಿದ್ದಾರೆ.

ರೆಹಮಾನ್ ಅವರ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ, ನಾನು ವೈದ್ಯರನ್ನು ಸಂಪರ್ಕಿಸಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರು ಚೆನ್ನಾಗಿದ್ದಾರೆ ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT